July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

ಉಜಿರೆಯ ಎಸ್. ಡಿ.ಎಂ. ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ತರಬೆತುದರರಾಗಿ ಚೆವರು ವಿನೋದ, ಜಿಲ್ಲಾ ಸಹಾಯಕ ಆಯುಕ್ತರು, ಕಾಸರಗೋಡು ಇವರು ಆಗಮಿಸಿದ್ದು ವಿದ್ಯಾರ್ಥಿಗಳಿಗೆ ರೋವರ್ ಮತ್ತು ರೇಂಜರ್ ವಿಭಾಗದ ‘ನಿಪುನ್ ‘ ಪರೀಕ್ಷೆಗೆ ಬೇಕಾದ ವಿವಿಧ ಕೌಶಲ್ಯಗಳನ್ನು ಹಾಗೂ ಪೂರ್ವ ಸಿದ್ಧತಾ ತಯಾರಿಕೆಗಳ ಬಗ್ಗೆ ಸಮಗ್ರ ತರಬೇತಿಯನ್ನೂ ನೀಡುತ್ತಿದ್ದಾರೆ.


ಇದಕ್ಕೂ ಮೊದಲು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಬಿರವನ್ನು ಉದ್ಘಾಟಸಿ ಮಾತನಾಡಿದ ಕಾಲೇಜಿನ ಪ್ರಚಾರ್ಯರಾದ ಪ್ರಮೋದ್ ಕುಮಾರ್ ಬಿ ಮಾತನಾಡಿ ಸ್ಕೌಟ್ ಎಂಬುದು ಒಂದು ನಿಸ್ವಾರ್ಥ ಸೇವಾ ಸಂಸ್ಥೆಯಾಗಿದ್ದು ಯಾವುದೇ ಫಲಪೇಕ್ಷೆ ಇಲ್ಲದೇ, ಯಾವುದೇ ಪ್ರಚಾರ ಬಯಸದೇ ಸೇವೆಯೇ ಪರಮ ಧರ್ಮ ಎಂಬ ತತ್ವದಡಿ ಕಾರ್ಯ ನಿರ್ವಹಿಸುತ್ತಿರುವುದು ತುಂಬಾ ಶ್ಲಾಘನೀಯ ಎಂದು ನುಡಿದು ಶಿಬಿರದ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.


ವೇದಿಕೆಯ ಮೇಲೆ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಅಧಿಕಾರಿಗಳಾದ ಲಕ್ಷ್ಮೀಶ್ ಭಟ್ ಮತ್ತು ಶ್ರೀಮತಿ ಅಂಕಿತಾ ಎಂ ಕೆ ಉಪಸ್ಥಿತರಿದ್ದರು.
ರೋವರ್ ವಿಕ್ರಮ್ ಸರ್ವರನ್ನು ಸ್ವಾಗತಿಸಿ, ರೋವರ್ ಪರೀಕ್ಷಿತ್ ವಂದಿಸಿ,ರೆಂಜರ್ ಮೇಘನಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

Suddi Udaya

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya
error: Content is protected !!