37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

ಕಡಿರುದ್ಯಾವರ: ಇಲ್ಲಿಯ ಹೊಸಮನೆ ಹರ್ಷಿತ್ ರವರು ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.


ಹರ್ಷಿತ್‌ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಡಿರುದ್ಯಾವರ ಗ್ರಾಮದ ಕೊಡಿಯಾಲ್‌ಬೈಲ್ ಶಾಲೆಯಲ್ಲಿ, ಪ್ರೌಢಶಾಲೆ ವಿದ್ಯಾಭ್ಯಾಸವನ್ನು ಎಸ್‌ಡಿಎಂ (ಕನ್ನಡ) ಉಜಿರೆಯಲ್ಲಿ, ಪಿ.ಯು ಶಿಕ್ಷಣವನ್ನು ಎಸ್.ಡಿ.ಎಂ ಉಜಿರೆಯಲ್ಲಿ, ಉಜಿರೆ ಎಸ್‌ಡಿಎಂ ನಲ್ಲಿ ಇಂಜಿನಿಯರಿಂಗ್ ಮಾಡಿ 2022 ರಲ್ಲಿ ನಡೆದ ವಿವಿಧ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ 2024 ಜನವರಿಯಲ್ಲಿ 6 ತಿಂಗಳ ತರಬೇತಿಗಾಗಿ ರಾಜಸ್ಥಾನದ ಅಲ್ವರ್‌ಗೆ ತೆರಳಿದರು. ಇದೀಗ ತರಬೇತಿ ಮುಗಿಸಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

ಇವರು ಕಡಿರುದ್ಯಾವರ ಗ್ರಾಮದ ಹೊಸಮನೆ ರಾಮಚಂದ್ರ ಗೌಡ ಮತ್ತು ಜಯಂತಿ ದಂಪತಿಯ ಪುತ್ರ.

Related posts

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya
error: Content is protected !!