September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

ತಣ್ಣೀರುಪಂತ : 2023-24 ನೇ ಸಾಲಿನಲ್ಲಿ ಶೇ 100 ಸಾಲ ವಸೂಲಾತಿ ಮಾಡಿದ ಸಾಧನೆಗಾಗಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷರಾದ ಎಂ. ಎನ್ .ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಜಗದೀಶ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ರವರಿಗೆ ಸ್ಮರಣಿಕೆ, ಸನ್ಮಾನ ಪತ್ರ ನೀಡಿ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಸಂಘವು ಸತತವಾಗಿ ಒಂಭತ್ತನೇ ಬಾರಿ ಪಡೆಯುವ ಪ್ರಶಸ್ತಿಯಾಗಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ತಾಲೂಕಿನ ನಿರ್ಧೇಶಕರಾದ ಕುಶಾಲಪ್ಪ ಗೌಡ ಹಾಗೂ ಇತರ ನಿರ್ಧೇಶಕರು ಹಾಗೂ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು

Related posts

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಮೇಲಂತಬೆಟ್ಟು : ಪ್ರೇಮಾ ಅವರಿಗೆ “ವಾತ್ಸಲ್ಯ” ಮನೆ ಹಸ್ತಾಂತರ

Suddi Udaya

ಉರುವಾಲು: ಕುಪ್ಪೆಟ್ಟಿ ರಸ್ತೆಯಲ್ಲಿ ಬೃಹತ್ ಹೊಂಡ: ಸ್ಥಳೀಯರಿಂದ ರಸ್ತೆಯ ಮಧ್ಯೆ ಕೆಂಪು ವಸ್ತ್ರವಿಟ್ಟು ಎಚ್ಚರಿಕೆಯ ಸೂಚನೆ

Suddi Udaya

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಮದ್ದಡ್ಕ: ಸಬರಬೈಲುನಲ್ಲಿ ಹೊಂಡಕ್ಕೆ ಬಿದ್ದ ಲಾರಿ‌

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
error: Content is protected !!