September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಬಂಗಾಡಿ ಸಹಕಾರಿ ವ್ಯವಸಾಯ ಸಂಘಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪ್ರದಾನ

ತಾಲೂಕಿನ ಮುಂಚೂಣಿ ಸಹಕಾರಿ ಸಂಸ್ಥೆಯಾದ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು 2023-24 ನೇ ಸಾಲಿನ ಸಂಘದ ಅತ್ಯುತ್ತಮ ಕಾರ್ಯವೈಖರಿ ಹಾಗೂ ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ದ.ಕ.ಜಿ.ಕೇಂದ್ರ ಸಹಕಾರ ಬ್ಯಾಂಕು ನಿ, ಮಂಗಳೂರು, ಇವರು ನೀಡುವ ಜಿಲ್ಲಾ ಮಟ್ಟದ ದ್ವೀತಿಯ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘವು ಏಳು ಶಾಖೆಗಳನ್ನು ಹೊಂದಿದ್ದು, 2023-24 ನೇ ಸಾಲಿನಲ್ಲಿ 1020-89 ಕೋಟಿ ವ್ಯವಹಾರ ನಡೆಸಿ 127-11 ಕೋಟಿ ಠೇವಣಿ ಹಾಗೂ 175-02 ಹೊಂದಿದೆ.2023-24 ನೇ ಸಾಲಿನಲ್ಲಿ 4-30ಕೋಟಿ ಲಾಭವನ್ನು ಗಳಿಸಿದೆ. ಕೋಟಿ ಹೊರಬಾಕಿ ಸಾಲವನ್ನು ಪ್ರಶಸ್ತಿ ಪಡೆದ ಸಂಘವನ್ನು ಆ.14 ರಂದು ದ.ಕ.ಜಿ.ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷರಾದ ಹರೀಶ್ ಸಾಲಿಯಾನ್ ಹಾಗೂ ಕಾರ್ಯನಿರ್ವಹಣಾಧಿಕಾರಿಯವರಾದ ದಯಾನಂದ ಶೆಟ್ಟಿಗಾರ್ ಇವರನ್ನು ಡಾ.ಎಂ.ಎನ್.ರಾಜೇಂದ್ರ ದ.ಕ.ಜಿ.ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಕುಮಾರ್ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕರರಾದ ಕುಶಾಲಪ್ಪ ಗೌಡ ಪೂವಾಜೆ, ಶಶಿಕುಮಾರ್ ರೈ ಹಾಗೂ ದ.ಕ.ಜಿ,ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರು, ಹಾಗೂ ಬಂಗಾಡಿ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷ ವಸಂತ ಗೌಡ, ನಿರ್ದೇಶಕರಾದ ರಮೇಶ್ ಕೆಂಗಾಜೆ, ವಿನಯ ಚಂದ್ರ ಕಿಲ್ಲೂರು, ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಕೆ., ಶ್ರೀಮತಿ ವಿಜಯ, ಸಿಬ್ಬಂದಿಗಳಾದ ಚಂದ್ರಕಾಂತ್ ಗೌಡ, ಬಾಲಕೃಷ್ಣ ಸುವರ್ಣ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya

ಪದ್ಮುಂಜ: ಆಟೋ ರಿಕ್ಷಾ ಪಲ್ಟಿ, ಗಂಭೀರ ಗಾಯಗೊಂಡ ಚಾಲಕ ಮೃತ್ಯು

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ಸದಸ್ಯ ಜೆಸಿ ಅಕ್ಷತ್ ರೈ ರವರು “ಸಾಧನಶ್ರೀ” ಪ್ರಶಸ್ತಿಗೆ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯವರನ್ನು ಗೌರವಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!