ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸತೀಶ್ ಕಾಶಿಪಟ್ಣ,ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಖ್ ಲತೀಫ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಕಳೆದ 14 ವರ್ಷಗಳಿಂದ ಪೆರಾಡಿ ಸಿಎ ಬ್ಯಾಂಕಿಗೆ ಸಾಧನಾ ಪ್ರಶಸ್ತಿ ನೀಡಿರುವುದು ಗಮನಾರ್ಹ.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಪ್ರವೀಣ್ ಪಿಂಟೋ
ಉಪಸ್ಥಿತರಿದ್ದರು. ‌

Leave a Comment

error: Content is protected !!