July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.

ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ಮನವಿಯನ್ನು ಸಲ್ಲಿಸಿದರು..

ಈ ಮನವಿಗೆ ರಕ್ಷಿತ್ ಶಿವರಾಂ ರವರು ಪೂರಕವಾಗಿ ಸ್ಪಂದಿಸಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮದ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಗೀತಾಕ್ಷಿ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಗರ್ಡಾಡಿ: ಸತ್ಯ ಶೋಧಕ ವೇದಿಕೆಯಿಂದ ಹಚ್ಚಾಡಿ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಕ್ಕಿಂಜೆ “ಅರ್ಶ್ ಎಜ್ಯುಕೇಶನ್ ಅಕಾಡೆಮಿ”ಯ ಪ್ರವೇಶಾತಿ ಆರಂಭ

Suddi Udaya

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಗರ್ಡಾಡಿ: ಬಿಜೆಪಿ ಕಾರ್ಯಕರ್ತರ ಹರ್ಷೋಲ್ಲಾಸ

Suddi Udaya
error: Content is protected !!