32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

ಉಜಿರೆ: ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು. 

ಉದ್ಘಾಟಕರಾಗಿ ಆಗಮಿಸಿದ ಶ್ರೀ ಧ. ಮ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರು ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ತುಳುನಾಡಿನ ಸಂಪ್ರದಾಯ ಪರಂಪರೆಯನ್ನು ಉಳಿಸಿಕೊಂಡು, ಆಚರಣೆ ಮಾತ್ರ ಆಗಿರದೆ ಪಾಲಿಸಿಕೊಂಡು ಬರಬೇಕು” ಎಂದು ತಿಳಿಸಿದರು 

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಇವರು “ತುಳುನಾಡಿನ ಸಂಸ್ಕೃತಿಯನ್ನು ನೆನಪಿಸಿಕೊಳ್ಳುವ ಇಂತಹ ಕಾರ್ಯಕ್ರಮಗಳು ಹೆಚ್ಚು ಸೂಕ್ತ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯ ಶಿಕ್ಷಕ   ಜಯರಾಮ ಮಯ್ಯ “ನಮ್ಮ ಸಂಸ್ಕೃತಿಯ ಅರಿವನ್ನು ಪಡೆದುಕೊಂಡು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ” ಎಂದು ತಿಳಿಸಿದರು.

ಕಾರ್ಯಕ್ರಮದ ಸಂಯೋಜಕರಾದ ರವಿಚಂದ್ರ ಜೈನ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ ಮತ್ತು ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ದೀಕ್ಷಿತಾ ಸ್ವಾಗತಿಸಿ, ತ್ರಿಷಾ ಜೈನ್  ವಂದಿಸಿದ ಈ ಕಾರ್ಯಕ್ರಮವನ್ನು ಯೋಗಿತಾ ನಿರೂಪಿಸಿದರು

Related posts

ಹದಗೆಟ್ಟ ರಸ್ತೆಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸಿದ ಶಿಬಾಜೆ ಗ್ರಾ.ಪಂ.

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಕೊಯ್ಯೂರು ಶಾಲೆಯ ಹಿರಿಯ ಸಹಶಿಕ್ಷಕಿ ನಿವೃತ್ತ ಶ್ರೀಮತಿ ರೆಜಿನಾ ಡಿಸಿಲ್ವ ರವರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂಪನ್ನ: ಶ್ರೀ ಭೂತ ಬಲಿ

Suddi Udaya
error: Content is protected !!