23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

ಮುಂಡಾಜೆ ಗ್ರಾಮದ ಕೂಳೂರು‌ ನಿವಾಸಿ, ಹಿರಿಯ ಮೇಸ್ತ್ರಿಗಳು ಹಾಗೂ ಧರ್ಮಬಂಧುವಾಗಿದ್ದ ಪುತ್ತಾಕ‌‌ ಕೂಳೂರು (78ವ.) ಅವರು ಅಲ್ಪ ಕಾಲದ ಅಸೌಖ್ಯದಿಂದ ಆ.12 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಪಾರ್ಶ್ವ ವಾಯು ಪೀಡಿತರಾಗಿದ್ದ ಅವರು ಹಲವು ವರ್ಷಗಳಿಂದ ವಿಶ್ರಾಂತಿಯಲ್ಲೇ ಇದ್ದರಾದರೂ ರವಿವಾರ ಹಠಾತ್ ಹೃದಯ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಅವರು ಕೊನೆಯುಸಿರೆಳೆದರು.

ಮರ್‌ಹೂಮ್ ಕಾಜೂರು ಜಮಲುಲ್ಲೈಲಿ ತಂಙಳ್ ಅವರ ಅನೇಕ ವರ್ಷ ನಿಕಟವರ್ತಿ ಮತ್ತು ಸೇವಕರಾಗಿದ್ದ ಅವರು ಮುಂಡಾಜೆ “ಮಸ್ಲಕ್” ಸಮಿತಿಯ ಸ್ಥಾಪಕಲ್ಲೊರ್ವರು‌ ಹಾಗೂ ಪ್ರಸ್ತುತ ಸಂಚಾಲಕರಾಗಿದ್ದರು. ಕೃಷಿಕರಾಗಿದ್ದ ಅವರು ಕನ್ಯಾಡಿ 2 ಇಲ್ಲಿ ಕೃಷಿ ತೋಟದ ಮೇಲ್ವಿಚಾರಕರಾಗಿ ದೀರ್ಘ ವರ್ಷ ಸೇವೆ ಸಲ್ಲಿಸಿದ್ದರು. ಬದ್ರಿಯಾ ಜುಮ್ಮಾ ಮಸ್ಜಿದ್ ಸೋಮಂತಡ್ಕ ಇದರ ಆಡಳಿತ ಸಮಿತಿಯಲ್ಲೂ ಹಲವು ವರ್ಷ ಸೇವೆ ಸಲ್ಲಿಸಿದ್ದು ಮಸೀದಿಯ ಆರಂಭಿಕ ದಾಖಲೆ ಪತ್ರಗಳು ಸರಿಪಡಿಸುವಲ್ಲಿ ತಮ್ಮ ಸೇವೆ ನೀಡಿದ್ದರು.

ಮೃತರು ಪತ್ನಿ, ಐವರು ಪುತ್ರರು ,‌ ಓರ್ವ ಪುತ್ರಿ ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Related posts

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya
error: Content is protected !!