September 6, 2026
ಗ್ರಾಮಾಂತರ ಸುದ್ದಿಸಮಸ್ಯೆ

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.
ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲು‌ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳೆಲ್ಲವೂ ಸುಟ್ಟು ಕರಕಲಾಗಿದೆ. ಅಲ್ಲದೆ ಹಿಂಭಾಗದ ಶೀಟಿನ‌ ಮೇಲ್ಛಾವಣಿ ಕೂಡ ಪುಡಿಪುಡಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಅಬ್ದುಲ್ ರಹಿಮಾನ್ ಅವರ ಮನೆಯವರು ಘಟನೆಯ ವೇಳೆ ಕುಟುಂಬ ಸಮೇತ ಮೂಡಬಿದ್ರೆಗೆ ತೆರಳಿದ್ದರಿಂದ ಜೀವಾಪಾಯದಿಂದ ಪಾರಾಗಿದ್ದಾರೆ. ಇಸುಬು ಅವರ ಮನೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿದ್ದರಾದರೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸಿಡಿಲಿನ ಆಘಾತಕ್ಕೆ ಮನೆಯ ಕಿಟಕಿ ಬಾಗಿಲುಗಳು, ಗಾಜು, ಮೇಲ್ಛಾವಣಿಯ ಶೀಟು, ಹೆಂಚುಗಳಿಗೆ ಹಾನಿಯಾಗಿದೆ. ಗೋಡೆ ಕೂಡ ಬಿರುಕು ಬಿಟ್ಟಿದೆ. ಸದ್ರಿ ಮನೆಯಲ್ಲಿ ವಾಸಿಸಲು ಭಯಪಡುವಂತಾಗಿದೆ. ಅಲ್ಲದೆ ಇವರ ಪಕ್ಕದ ಮನೆಯವರ ಇನ್ವರ್ಟರ್ ಗಳು, ವಿದ್ಯುತ್ ಉಪಕರಣಗಳು ಕೆಟ್ಟು ಹೋಗಿದೆ. ವಿಚಾರ ತಿಳಿದ ವೇಣೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರದ ಭರವಸೆ ನೀಡಿದ್ದಾರೆ

Related posts

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಫೆ. 2 : ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗ್ರಾಮ ಸಂಗ್ರಾಮ್; ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ: ಪ್ರದೀಪ್ ಈಶ್ವರ್ ಭಾಗಿ

Suddi Udaya

ಬೆಳ್ತಂಗಡಿ ಜೈನ ಬಸದಿ ಬಳಿ ಕಾರುಗಳೆರಡು ಪರಸ್ಪರ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

Suddi Udaya
error: Content is protected !!