ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ 2023-24 ನೇ ಸಾಲಿನ ಮಹಾಸಭೆಯಲ್ಲಿ ಸಾಧನ ಪ್ರಶಸ್ತಿ ಯನ್ನು ಸಂಘದ ಅಧ್ಯಕ್ಷರ ಪರವಾಗಿ ವಿಶೇಷಾಧಿಕಾರಿಗಳಾದ ಯಂ ಮೋನಪ್ಪ ಪೂಜಾರಿ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ| ರಾಜೇಂದ್ರ ಕುಮಾರ್, ಉಪಾಧ್ಯಕ್ಷರಾದ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್ ಹಾಗೂ ಇತರ ನಿರ್ದೇಶಕರುಗಳು. ಸಹಕಾರ ಸಂಘಗಳ ಉಪನಿಬಂಧಕರದ ರಮೇಶ್, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಆನಂದ ಪೂಜಾರಿ, ಸರ್ವೆದೋಳ ಉಪಸ್ಥಿತರಿದ್ದರು.

Leave a Comment

error: Content is protected !!