April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ತುಳು ಸಂಸ್ಕೃತಿ ಪರಿಚಯಿಸುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.14ರಂದು ನಡೆಯಿತು.

ಮುಖ್ಯ ಅತಿಥಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವನರ್ತಕ ಮತ್ತು ಸಿವಿಲ್ ಇಂಜಿನಿಯರಿಂಗ್ ಉಪನ್ಯಾಸಕ ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಆಟಿ ತಿಂಗಳ ದಿನಗಳ ಬಗ್ಗೆ ತಿಳಿಸಿದರು. ಹಿರಿಯರು ಬೇಸಾಯ ಮಾಡುತ್ತಿದ್ದ ಕಾಲವನ್ನು ನೆನಪಿಸಿದರು. ತುಳುನಾಡ ಕ್ಯಾಲೆಂಡರ್’ನ ಸೊಗಡು, ಆಟಿ ಕಳಂಜದ ವೈಶಿಷ್ಟ್ಯ, ದೈವ- ದೇವರುಗಳ ಕೆಲಸ ಕಾರ್ಯವನ್ನು ವಿವರಿಸಿದರು. ಆಟಿಯ ಕುರಿತಾದ ಹಾಡುಗಳನ್ನು ಹಾಡಿ ಸಾಂಪ್ರದಾಯಿಕ ತುಳು ಹಾಡುಗಳ ವೈಶಿಷ್ಟ್ಯವನ್ನು ವಿವರಿಸಿದರು.

ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಆಟಿ ತಿಂಗಳ ಬಗೆಗಿನ ಅರಿವಿನ ಅಗತ್ಯದ ಬಗ್ಗೆ ತಿಳಿಸಿದರು.

ಮನಸ್ವಿ ಅತಿಥಿ ಪರಿಚಯ ನೀಡಿದರು. ಜ್ಞಾನ್ ಅನ್ವೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೀಕ್ಷಾ ಸ್ವಾಗತಿಸಿ, ಅದೀಶ್ ವಂದಿಸಿ, ಮಧುಶ್ರೀ ನಿರೂಪಿಸಿದರು.

ಅತಿಥಿಗಳನ್ನು ಚೆಂಡೆ ವಾದನದೊಂದಿಗೆ ಸ್ವಾಗತಿಸಿ, ವೀಳ್ಯದೆಲೆ ಅಡಿಕೆ ನೀಡಿ, ವೇದಿಕೆಗೆ ಬರಮಾಡಿಕೊಂಡದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ತುಳು ಹಾಡು, ತುಳು ಗಾದೆಮಾತುಗಳು, ಒಗಟುಗಳು ಮತ್ತು ನೃತ್ಯ ಪ್ರಸ್ತುತಪಡಿಸಿದರು.

ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಹಾಗೂ ಹಳೆಯ ಕಾಲದ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

Related posts

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ತೋಟತ್ತಾಡಿ : ಈಶ್ವರ್ ಗೌಡ ಪಿ. ಎಚ್. ನಿಧನ

Suddi Udaya

ವಾಲಿಬಾಲ್ ಪಂದ್ಯಾಟ: ಪದ್ಮುಂಜ ಸರಕಾರಿ ಪ್ರೌಢಶಾಲಾ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಸೆ.13, 14 : ವಾಣಿ ಕಾಲೇಜಿನಲ್ಲಿ ತುಳು ಸಾಹಿತ್ಯ ರಚನಾ ಕಮ್ಮಟ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ