ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ತುಳು ಸಂಸ್ಕೃತಿ ಪರಿಚಯಿಸುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.14ರಂದು ನಡೆಯಿತು.

ಮುಖ್ಯ ಅತಿಥಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವನರ್ತಕ ಮತ್ತು ಸಿವಿಲ್ ಇಂಜಿನಿಯರಿಂಗ್ ಉಪನ್ಯಾಸಕ ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಆಟಿ ತಿಂಗಳ ದಿನಗಳ ಬಗ್ಗೆ ತಿಳಿಸಿದರು. ಹಿರಿಯರು ಬೇಸಾಯ ಮಾಡುತ್ತಿದ್ದ ಕಾಲವನ್ನು ನೆನಪಿಸಿದರು. ತುಳುನಾಡ ಕ್ಯಾಲೆಂಡರ್’ನ ಸೊಗಡು, ಆಟಿ ಕಳಂಜದ ವೈಶಿಷ್ಟ್ಯ, ದೈವ- ದೇವರುಗಳ ಕೆಲಸ ಕಾರ್ಯವನ್ನು ವಿವರಿಸಿದರು. ಆಟಿಯ ಕುರಿತಾದ ಹಾಡುಗಳನ್ನು ಹಾಡಿ ಸಾಂಪ್ರದಾಯಿಕ ತುಳು ಹಾಡುಗಳ ವೈಶಿಷ್ಟ್ಯವನ್ನು ವಿವರಿಸಿದರು.

ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಆಟಿ ತಿಂಗಳ ಬಗೆಗಿನ ಅರಿವಿನ ಅಗತ್ಯದ ಬಗ್ಗೆ ತಿಳಿಸಿದರು.

ಮನಸ್ವಿ ಅತಿಥಿ ಪರಿಚಯ ನೀಡಿದರು. ಜ್ಞಾನ್ ಅನ್ವೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೀಕ್ಷಾ ಸ್ವಾಗತಿಸಿ, ಅದೀಶ್ ವಂದಿಸಿ, ಮಧುಶ್ರೀ ನಿರೂಪಿಸಿದರು.

ಅತಿಥಿಗಳನ್ನು ಚೆಂಡೆ ವಾದನದೊಂದಿಗೆ ಸ್ವಾಗತಿಸಿ, ವೀಳ್ಯದೆಲೆ ಅಡಿಕೆ ನೀಡಿ, ವೇದಿಕೆಗೆ ಬರಮಾಡಿಕೊಂಡದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ತುಳು ಹಾಡು, ತುಳು ಗಾದೆಮಾತುಗಳು, ಒಗಟುಗಳು ಮತ್ತು ನೃತ್ಯ ಪ್ರಸ್ತುತಪಡಿಸಿದರು.

ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಹಾಗೂ ಹಳೆಯ ಕಾಲದ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya
error: Content is protected !!