September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

ಉಜಿರೆ: ಬೇಸಾಯ ಕಾಲದಲ್ಲಿ ಕರಾವಳಿ ಜನರಿಗೆ ಉತ್ಸವ ಕಾಲ. ಇಲ್ಲಿನ ಜನರು ಗದ್ದೆಗಳಲ್ಲಿ ತಮ್ಮ ಬಹುತೇಕ ಜೀವನ ಕಾಣುವವರು. ಇಂತಹ ಗದ್ದೆಗಳಲ್ಲಿ ಹಿಂದಿನ ಆಟೋಟಗಳು ಮರೆಯಾಗುತ್ತಿವೆ. ಅನೇಕ ಚರ್ಮರೋಗಗಳಿಗೆ ಕೆಸರು ಔಷಧವಾಗಿದೆ. ಈಗಿನ ಕಾಲದ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳ ಮೂಲಕವಾದರೂ ಕೆಸರಿನ ಪರಿಚಯ ಆಗುತ್ತಿರುವುದು ಸಂತೋಷದಾಯಕ ವಿಚಾರ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಉಜಿರೆಯ ಪೆರ್ಲದ ಕೆಸರು ಗದ್ದೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ನಡೆದ ಕೆಸರಿನಲ್ಲಿ ಕಸರತ್ತು ಸ್ಪರ್ಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ಥಳೀಯ ಪ್ರಗತಿಪರ ಕೃಷಿಕ ರಾಮಣ್ಣ ನಾಯ್ಕ್ ಸ್ಪರ್ಧೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆಸರು ಗದ್ದೆ ಆಟೋಟಗಳಿಗೆ ಸಂಬಂಧಿಸಿದ ವಿಶೇಷವಿರುವ ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಕೆಸರು ಗದ್ದೆಯಲ್ಲಿ ಓಟ , ಉಪ್ಪು ಮೂಟೆ , ಸೋಗೆ ಎಳೆಯುವುದು , ಹಗ್ಗ ಜಗ್ಗಾಟ , ವಾಲಿಬಾಲ್ ಮುಂತಾದ ಅನೇಕ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ರಾ.ಸೇ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಕಾರ್ಯಕ್ರಮಾಧಿಕಾರಿ ಪದ್ಮಶ್ರೀ ರಕ್ಷಿತ್ , ಹಿರಿಯ ಸ್ವಯಂ ಸೇವಕರಾದ ಧನುಷ್ ಕೆ. ಪಿ , ಶಶಿರಾಜ್ , ಭರತ್ ಕೆ , ಸಾಯಿ ಕಿರಣ್ , ಭರತ್ ರಾವ್ , ವೀರೇಶ್ ಮುಂತಾದವರು ಉಪಸ್ಥಿತರಿದ್ದರು.

ಸ್ವಯಂ ಸೇವಕಿ ಅಂಜನಾ ಸ್ವಾಗತಿಸಿದರು. ಘಟಕದ ನಾಯಕಿ ಪ್ರಾಪ್ತಿ ಗೌಡ ನಿರೂಪಿಸಿ , ವಂದಿಸಿದರು.

Related posts

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಲಯ ಮಟ್ಟದ ಪ್ರಾಥಮಿಕ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ತೀರಾ ಹದಗೆಟ್ಟ ಪಡಂಗಡಿ ರಸ್ತೆ: ದುರಸ್ತಿಗೊಳಿಸುವಂತೆ ಪಡಂಗಡಿ ಗ್ರಾಮಸ್ಥರಿಂದ ಮನವಿ

Suddi Udaya

ಇಂದು (ಜ.14) ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್‌ನ ವತಿಯಿಂದ ಲಯನ್ಸ್ ಯಕ್ಷೋತ್ಸವ: ಶ್ರೀಕ್ಷೇತ್ರ ಧರ್ಮಸ್ಥಳ ಮೇಳದವರಿಂದ “ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ” ಯಕ್ಷಗಾನ ; ಜ.14 ರ 14 ಬಗೆಯ ವಿಶೇಷ ಖಾದ್ಯಗಳ ಸವಿ ಉಪಾಹಾರ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya
error: Content is protected !!