23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

ಉಜಿರೆ: ಬೇಸಾಯ ಕಾಲದಲ್ಲಿ ಕರಾವಳಿ ಜನರಿಗೆ ಉತ್ಸವ ಕಾಲ. ಇಲ್ಲಿನ ಜನರು ಗದ್ದೆಗಳಲ್ಲಿ ತಮ್ಮ ಬಹುತೇಕ ಜೀವನ ಕಾಣುವವರು. ಇಂತಹ ಗದ್ದೆಗಳಲ್ಲಿ ಹಿಂದಿನ ಆಟೋಟಗಳು ಮರೆಯಾಗುತ್ತಿವೆ. ಅನೇಕ ಚರ್ಮರೋಗಗಳಿಗೆ ಕೆಸರು ಔಷಧವಾಗಿದೆ. ಈಗಿನ ಕಾಲದ ವಿದ್ಯಾರ್ಥಿಗಳಿಗೆ ಸ್ಪರ್ಧೆಗಳ ಮೂಲಕವಾದರೂ ಕೆಸರಿನ ಪರಿಚಯ ಆಗುತ್ತಿರುವುದು ಸಂತೋಷದಾಯಕ ವಿಚಾರ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಉಜಿರೆಯ ಪೆರ್ಲದ ಕೆಸರು ಗದ್ದೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ನಡೆದ ಕೆಸರಿನಲ್ಲಿ ಕಸರತ್ತು ಸ್ಪರ್ಧಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸ್ಥಳೀಯ ಪ್ರಗತಿಪರ ಕೃಷಿಕ ರಾಮಣ್ಣ ನಾಯ್ಕ್ ಸ್ಪರ್ಧೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೆಸರು ಗದ್ದೆ ಆಟೋಟಗಳಿಗೆ ಸಂಬಂಧಿಸಿದ ವಿಶೇಷವಿರುವ ಭಿತ್ತಿಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಕೆಸರು ಗದ್ದೆಯಲ್ಲಿ ಓಟ , ಉಪ್ಪು ಮೂಟೆ , ಸೋಗೆ ಎಳೆಯುವುದು , ಹಗ್ಗ ಜಗ್ಗಾಟ , ವಾಲಿಬಾಲ್ ಮುಂತಾದ ಅನೇಕ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ರಾ.ಸೇ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಕಾರ್ಯಕ್ರಮಾಧಿಕಾರಿ ಪದ್ಮಶ್ರೀ ರಕ್ಷಿತ್ , ಹಿರಿಯ ಸ್ವಯಂ ಸೇವಕರಾದ ಧನುಷ್ ಕೆ. ಪಿ , ಶಶಿರಾಜ್ , ಭರತ್ ಕೆ , ಸಾಯಿ ಕಿರಣ್ , ಭರತ್ ರಾವ್ , ವೀರೇಶ್ ಮುಂತಾದವರು ಉಪಸ್ಥಿತರಿದ್ದರು.

ಸ್ವಯಂ ಸೇವಕಿ ಅಂಜನಾ ಸ್ವಾಗತಿಸಿದರು. ಘಟಕದ ನಾಯಕಿ ಪ್ರಾಪ್ತಿ ಗೌಡ ನಿರೂಪಿಸಿ , ವಂದಿಸಿದರು.

Related posts

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಪುದುವೆಟ್ಟು ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!