September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 78 ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಅತ್ಯಂತ ವಿನೂತನವಾಗಿ ಆಚರಿಸಲಾಯಿತು.

ವಿಧಾನ ಪರಿಷತ್ ಶಾಸಕ‌ಕೆ. ಪ್ರತಾಪಸಿಂಹ ನಾಯಕ್ ಧ್ವಜಾರೋಹಣ ನೆರವೇರಿಸಿದ ಸ್ವಾತಂತ್ರೋತ್ಸವದ ಸಂದೇಶ ನೀಡಿದರು.

ನಮ್ಮ‌ನಡಿಗೆ ಅರಿವಿನಡೆಗೆ ಎಂಬ ಧ್ಯೇಯದಡಿ ವೈವಿದ್ಯಮಯ ಸಿಂಗಾರಿ ಮೇಳ,ಹುಲಿವೇಷ ಮತ್ತು ಉದ್ಘೋಷಗಳ ಮೂಲಕ ಎಕ್ಸೆಲ್ ಕಾಲೇಜಿನಿಂದ ಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರದವರೆಗೆ ಬ್ರಹತ್ ಪಥ ಸಂಚಲನ ನಡೆಯಿತು.ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು.

ಅಪರಾಹ್ನ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆದ ರಕ್ಷಕ ನಮನ ಕಾರ್ಯಕ್ರಮದಲ್ಲಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬೆಸ್ಟ್ ಪೌಂಢೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭಾಗವಹಿಸಿದ್ದರು.

ಉದಯವಾಣಿ,ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ಉಪಾಧ್ಯಕ್ಷ ರಾಮಚಂದ್ರ ವಮಿಜಾರು ಅಭಿನಂದನಾ ಭಾಷಣ ಮಾಡಿದರು.

ಭಾರತೀಯ ಸೇನೆಯ ಯೋಧರು,ಆರಕ್ಷಕ ಪಡೆಗಳಲ್ಲಿ ರಕ್ಷಕರಾದ ಎಕ್ಸೆಲ್ ವಿದ್ಯಾರ್ಥಿಗಳ ಹೆತ್ತವರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಗೌರವ ಉಪಸ್ಥಿತಿಯಲ್ಲಿ ಎಕ್ಸೆಲ್ ಕಾಲೇಜಿನ ಕಾರ್ಯದರ್ಶಿ ಅಭಿರಾಮ್ ಬಿ.ಯಸ್,ಎಕ್ಸೆಲ್ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ಇನ್ ಚಾರ್ಜ್ ಪ್ರಿನ್ಸಿಪಾಲ್ ಡಾ.ಪ್ರಜ್ವಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು.

Related posts

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಸಿರಿ ಸಂಸ್ಥೆಯ ನೂತನ ಉತ್ಪಾದನಾ ಸಂಕೀರ್ಣದ ಪೂಜಾ ಸಮಾರಂಭ: ಡಾ.ಹೆಗ್ಗಡೆ ಕುಟುಂಬಸ್ಥರು, ಸಿರಿ ಸಂಸ್ಥೆಯ ನಿರ್ದೇಶಕರುಗಳು ಭಾಗಿ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya

ಧಮ೯ಸ್ಥಳ ಮೃತದೇಹ ಹೂತು ಹಾಕಿದ ಪ್ರಕರಣ ತನಿಖೆ: ಬೆಳ್ತಂಗಡಿ ಠಾಣಾ ಬಳಿ ಎಸ್.ಐ.ಟಿ ಕಚೇರಿ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!