25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ” ನಶಾ ಮುಕ್ತ ಭಾರತ ಅಭಿಯಾನ ” ಎಂಬ ವಿಷಯ ವನ್ನು ಮುಂದಿಟ್ಟು ಕೂಂಡು 78ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಮುಖ್ಯ ಅತಿಥಿಗಳಾದ ಶ್ರೀಮತಿ ಶಾರಿಕಾ. ಡಿ .ಶೆಟ್ಟಿ ಹಾಗೂ ಗಣ್ಯರು ಸ್ವಾತಂತ್ರ್ಯ ಹೋರಾಟಗಾರರಾದ ಮಹಾತ್ಮ ಗಾಂಧೀಜಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು .ಮುಖ್ಯ ಅತಿಥಿಗಳಾದ ಶ್ರೀಮತಿ ಸಾರಿಕಾ. ಡಿ .ಶೆಟ್ಟಿ ಧ್ವಜಾರೋಹಣವನ್ನು ಮಾಡಿ ಸ್ವಾತಂತ್ರ ದಿನದ ಮಹತ್ವವನ್ನು ತಿಳಿಸಿ ಕೊಟ್ಟರು. ಶಾಲಾ ನಾಯಕ ಸುಜಿತ್ ನೇತೃತ್ವದಲ್ಲಿ ಮಕ್ಕಳು ಘೋಷಣೆ ಕೂಗಿದರು ಮತ್ತು ಮಕ್ಕಳು ಮಾಸ್ ಪಿ.ಟಿ ಯನ್ನು ಸೊಗಸಾಗಿ ಮಾಡಿದರು.

ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮ್ ಪಂಚಾಯತ್ ಸದಸ್ಯರು ಹಾಗೂ ನಮ್ಮ ಶಾಲೆಯ ಅಡುಗೆ ಸಿಬ್ಬಂದಿಯೂ ಆದ ಶ್ರೀಮತಿ. ಭಾರತಿ, ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಕೆ.ನಂದ , ಉಪಾಧ್ಯಕ್ಷರು ಶ್ರೀಮತಿ ರಮ್ಯಾ ಗೌರವ ಸಲಹೆಗಾರರಾದ .ರಾಜೇಂದ್ರ ಅಜ್ರಿ ,.ನವೀನ್ ಚಂದ್ರ ಶೆಟ್ಟಿ. ನಮ್ಮ ಶಾಲೆಯ ಹಳೆ ವಿದ್ಯಾರ್ಥಿ .ಸುದರ್ಶನ್ ಕನ್ಯಾಡಿ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಪುಷ್ಪಾ.ಎನ್, ಶಾಲಾ ಶಿಕ್ಷಕ ವೃಂದ,ಪೋಷಕ ವೃಂದ,ಶಾಲಾ ಮೇಲುಸ್ತುವಾರಿ ಸಮಿತಿಯ ಸರ್ವ ಸದಸ್ಯರು,ಶಾಲಾ ನಾಯಕ ಸುಜಿತ್ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಜೇಂದ್ರ ಅಜ್ರಿ “ನಶಾ ಮುಕ್ತ ಭಾರತ ಅಭಿಯಾನ” ಬಗ್ಗೆ ಮಾಹಿತಿಯನ್ನು ನೀಡಿದರು .ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ .ಕೆ ನಂದ ರವರು ಶುಭ ಆರೈಸಿದರು. ಕಾರ್ಯಕ್ರಮವನ್ನು ನಮ್ಮ ಶಾಲಾ ಗೌರವ ಶಿಕ್ಷಕಿಯಾದ ಶ್ರೀಮತಿ. ರಾಜಶ್ರೀ ನಿರೂಪಣೆಯನ್ನು , ಗೌರವ ಶಿಕ್ಷಕಿಯಾದ ಶ್ರೀಮತಿ .ರೇವತಿ ಸ್ವಾಗತವನ್ನು ಶಾಲಾ ಅತಿಥಿ ಶಿಕ್ಷಕಿಯಾದ ಶ್ರೀಮತಿ. ಶ್ವೇತಾ ಧನ್ಯವಾದ ಕಾರ್ಯಕ್ರಮವನ್ನು ಮಾಡಿದರು.

ಶಾಲಾ ಸಹ ಶಿಕ್ಷಕಿಯಾದ ಶ್ರೀಮತಿ ದೀಪಿಕಾ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

Related posts

ಫೆ.7-8: ನಾಲ್ಕೂರು ಹುಂಬೆಜೆ ಪಲ್ಕೆಯಲ್ಲಿ ದೊಂಪದ ಬಲಿ ಮತ್ತು ಶ್ರೀ ಕೊಡಮಣಿತ್ತಾಯ ನೇಮ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೊ ಮೋಟರ್ಸ್ನಲ್ಲಿ ಎಲೆಕ್ಟ್ರಿಕಲ್ ದ್ವಿಚಕ್ರ ವಾಹನ ಬುಕ್ಕಿಂಗ್ ಹಾಗೂ ಸರ್ವಿಸ್ ಸೇವೆ ಲಭ್ಯ

Suddi Udaya

ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡ ಕಾಮಗಾರಿಯ ಬಗ್ಗೆ ಸ್ಪೀಕರ್ ಖಾದರ್ ರೊಂದಿಗೆ ಚರ್ಚೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ನಾಡಿನಾದ್ಯಂತ ನವರಾತ್ರಿ ಸಂಭ್ರಮ; ಕರಾವಳಿಯಲ್ಲಿ ಮಾರ್ನೆಮಿ ವೇಷಗಳ ಸದ್ದು ಆರಂಭ

Suddi Udaya
error: Content is protected !!