September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಮುಹಿಯುದ್ದೀನ್ ಜುಮಾ ಮಸೀದಿ ಮುರ – ನಾವೂರು ಇಲ್ಲಿನ ನೂರುಲ್ ಹುದಾ ಮದರಸ ವಠಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಬಹಳ ವಿಜೃಂಭಣೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಕಮಿಟಿ ಅಧ್ಯಕ್ಷರಾದ ಎನ್. ಕೆ ಹಸೈನಾರ್ ವಹಿಸಿದ್ದರು. ಎಂಜೆಎಂ ಮುರ ಇಲ್ಲಿನ ಖತೀಬ್ ಬಶೀರ್ ಸಅದಿ ದುಆ ಹಾಗೂ ಸಂದೇಶ ಭಾಷಣ ಮಾಡುತ್ತಾ ಹಲವು ಮಂದಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು,ಅದನ್ನು ಉಳಿಸಿಕೊಳ್ಳಲು ಯಾವ ತ್ಯಾಗಕ್ಕೂ ನಾವು ಸನ್ನದ್ಧರಾಗಬೇಕಿಗಿದೆ ಎಂದರು.

ನೂರುಲ್ ಹುದಾ ಮದರಸದ ಸದರ್ ಮುಅಲ್ಲಿಮ್ ಅಬ್ದುಲ್ ಹಮೀದ್ ಝುಹರಿ, ಮುಹಿಯುದ್ದೀನ್ ಜುಮಾ ಮಸೀದಿ ಪ್ರ.ಕಾರ್ಯದರ್ಶಿ ಅಬ್ದುಲ್ ಖಾದರ್ ನಾವೂರು ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ಸಭೆಯ ಮುಂದಿಟ್ಟರು.

ವೇದಿಕೆಯಲ್ಲಿ ಜಮಾಅತ್ ಉಪಾಧ್ಯಕ್ಷ ಮುಹಮ್ಮದ್ ಮುಸ್ಲಿಯಾರ್, ಕೋಶಾಧಿಕಾರಿ ಇಬ್ರಾಹಿಂ ಎನ್. ಎ, ಕಾರ್ಯದರ್ಶಿಗಳಾದ ಸುಲೈಮಾನ್ ಪಿ.ವೈ, ಸ್ವಾದಿಕ್ ನಾವೂರು, ಜಮಾಅತ್ ಕಮಿಟಿ ಸದಸ್ಯರುಗಳಾದ ಹಸನಬ್ಬ ನಿoರ್ದಿ, ಮುಹಮ್ಮದ್ ಪಿ.ಎಂ ಮುರ, ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಇಸ್ಮಾಯಿಲ್ ಕಿರ್ನಡ್ಕ, ಪಿ.ಯು ಅಲಿಕುಂಞ ಸಖಾಫಿ, ಮದರಸ ಅಧ್ಯಾಪಕರಾದ ಹನೀಫ್ ಸಖಾಫಿ, ಸಿದ್ದೀಕ್ ಸಖಾಫಿ, ಷರೀಫ್ ಮುಸ್ಲಿಯಾರ್, ಖಾಲಿದ್ ಮದನಿ, ಎಂಜೆಎಂ ನ ಎಲ್ಲಾ ಅಂಗಸಂಸ್ಥೆಗಳ ನಾಯಕರು, ಮದರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮದರಸ ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧಾ ವಿಜೇತರಿಗೆ ಬೆಳ್ತಂಗಡಿ ಇಮೇಜ್ ಮೊಬೈಲ್ ಮಾಲಕರಾದ ಅಝರ್ ಎನ್. ಕೆ ಪ್ರಶಸ್ತಿ ಪ್ರಧಾನ ಮಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಿ ಸಂಭ್ರಮಿಸಲಾಯಿತು.

Related posts

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಮಾವಿನಕಟ್ಟೆ ಸಾಂತಾ ಆನ್ನಾ ಮಾತೆಯ ಚಚ್೯ ನಲ್ಲಿ ಸಂಭ್ರಮದ ತೆನೆ ಹಬ್ಬ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya
error: Content is protected !!