25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮ ನಡೆಯಿತು.


ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಧ್ವಜರೋಹಣ ನೆರವೇರಿಸಿ ದೇಶಕೋಸ್ಕರ ಬಲಿದಾನಗೈದ ರಾಷ್ಟ ಪ್ರೇಮಿಗಳು, ವೀರ ಸೇನಾನಿಗಳನ್ನು ಸ್ಮರಿಸಿದರು, ಪಂಚಾಯತ್ ಮಾಜಿ ಅಧ್ಯಕ್ಷರಾದ ವಕೀಲ ಉದಯ ಬಿ ಕೆ, ಅಬ್ಬಾಸ್ ಬಟ್ಲಡ್ಕ, ಹಾಗೂ ಪಂಚಾಯತ್ ಸದಸ್ಯೆ ಮಂಜುಶ್ರೀ ಇವರು ಸಮಯೋಚಿತವಾಗಿ ಸ್ವಾತoತ್ರ ದಿನಾಚರಣೆಯ ಮಹತ್ವ, ಮುಂದಿನ ಸ್ಥಿತಿಗತಿಗಳ ಬಗ್ಗೆ ಮೆಲುಕು ಹಾಕಿದರು.

ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಕಾರ್ಯಕ್ರಮ ನಡೆಸಿಕೊಟ್ಟರು, ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಪುಷ್ಪಾವತಿ, ಮಾಜಿ ಸದಸ್ಯರಾದ ಉಮೇಶ್ ಗೌಡ ಪರಕ್ಕಾಜೆ, ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ,ಗಂಗಾಧರ ಪೂಜಾರಿ,ಚೇತನ್ ಪಾಲ್ತಿಮಾರ್, ಮೋಹನ್ ಗೌಡ, ಶಿವ ಗೌಡ ಹೇವ, ಶಿವ ಪ್ರಸಾದ್ ಸುದೆಪ್ಪಿಲ, ಪರಮೇಶ್ವರಿ ಪುಯಿಲ ,ಭಾರತಿ ಕೊಡಿಯೇಲು, ಅನಿತಾ ಕುರುಡಂಗೆ, ಸುಚಿತ್ರಾ ಮೂರ್ತಜೆ, ವಿಮಲಾ ತಾರಿದಡಿ, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya
error: Content is protected !!