ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ:ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ 15 ರಂದು ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಸಂಭ್ರಮದಿಂದ ನೆರವೇರಿತು.

ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ, ವಕೀಲರಾದ ಅನಿಲ್ ಕುಮಾರ್ ಯು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯಕ್ಕೆ ಹೋರಾಡಿದ ವೀರ ಸೈನಿಕರ ಪರಾಕ್ರಮವನ್ನು ವಿವರಿಸಿದರು, ಅಲ್ಲದೇ ನಾವೆಲ್ಲ ಇವತ್ತು ಸ್ವಾತಂತ್ರ್ಯವಾಗಿ ಯಾವುದೇ ಭಯವಿಲ್ಲದೇ ಬದುಕಬೇಕಾದರೆ ನಮ್ಮನ್ನು ಕಾಯುವ ಸೈನಿಕರ ಪರಿಶ್ರಮ ಕಾರಣ ಎಂದು ಹೇಳುತ್ತಾ ಸ್ವಾತಂತ್ರ್ಯ ದಿನಾಚರಣೆಗೆ ಶುಭ ಕೋರಿದರು.

ಮುಳಿಯ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Leave a Comment

error: Content is protected !!