July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ.15 ರಂದು ಬೆಳ್ತಂಗಡಿ ತಾಲೂಕು ಕಛೇರಿ ಆವರಣದಲ್ಲಿ ಸಂಭ್ರಮದಿಂದ ನೆರವೇರಿತು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣವನ್ನು ನೆರವೇರಿಸಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿದ್ದರು., ಪ್ರಧಾನ ಭಾಷಣಕಾರರಾಗಿ ನಾವೂರು ಆರೋಗ್ಯ ಕ್ಲಿನಿಕ್‌ನ ಡಾ.ಪ್ರದೀಪ್ ಎ. ಸ್ವಾತಂತ್ರ್ಯೋತ್ಸವದ ಮಹತ್ವದ ಬಗ್ಗೆ ತಿಳಿಸಿದರು.

ಈ ಸಂದರ್ಭ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಸಕ೯ಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಬೆಳ್ತಂಗಡಿ ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಬೆಂಕಿ ರಹಿತ ಅಡುಗೆ, ಪ್ರಾತ್ಯಕ್ಷಿಕೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya
error: Content is protected !!