September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

ವೇಣೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಖಂಡ ಹಾಗೂ ಹಿಂದೂ ಜಾಗರಣ ವೇದಿಕೆ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆಯು ಆ.14ರಂದು ವೇಣೂರು ಶ್ರೀರಾಮ ಭಜನಾ ಮಂದಿರದಿಂದ ಹೊರಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಪಂಜನ್ನು ಹಿಡಿದು ಮೆರವಣಿಗೆಯ ಮೂಲಕ ನಡೆಯಿತು.

ಸಂಘದ ಮಂಗಳೂರು ವಿಭಾಗದ ಸಾಮರಸ್ಯ ಸಹ ಸಂಯೋಜಕ ಶಿವಪ್ರಸಾದ ಮಲೆಬೆಟ್ಟು ಇವರು ದಿಕ್ಸೂಚಿ ಭಾಷಣವನ್ನು ಮಾಡಿ ಸ್ವಾತಂತ್ರ್ಯದ ಪೂರ್ವದಲ್ಲಿ ಅಖಂಡವಾಗಿದ್ದ ಭಾರತ ತ್ರಿಖಂಡವಾದ ಕರಾಳ ದಿನದ ಸನ್ನಿವೇಶಗಳನ್ನು ನೆನಪಿಸಿ ಹಿಂದೂ ಸಮಾಜ ಸಂಘಟಿತವಾಗಿ ಜಾಗೃತವಾದಾಗ ಮಾತ್ರ ರಾಷ್ಟ್ರ ಉಳಿದೀತು ಎಂದರು.

ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ನಿರಂಜನ ನಿಟ್ಟಡೆ, ಪ್ರಮುಖರಾದ ವಿಜಯ ಗೌಡ, ಸುದರ್ಶನ್ ಕಾರಂತ್, ಸೋಮನಾಥ ಕೆ.ವಿ., ರಮೇಶ್ ಹೆಗ್ಡೆ, ದಿನೇಶ್ ಕರಿಮಣೇಲು, ಕೆ.ವೈ. ರವಿ ಭಟ್ ಇನ್ನಿತರರು ಉಪಸ್ಥಿತರಿದ್ದರು.

ವಿ.ಹಿಂ.ಪ. ನ ಪ್ರಮುಖರಾದ ಸುದೀಪ್ ಪಟವರ್ಧನ್ ಸ್ವಾಗತಿಸಿ, ರೋಹಿತ್ ಆಚಾರ್ಯ ನಡ್ತಿಕಲ್ಲು ವೈಯಕ್ತಿಕ ಗೀತೆ ಹಾಡಿದರು. ಸಂತೋಷ ಮಂಜಿಲ ಸಂಕಲ್ಪ ಬೋಧಿಸಿ, ವಿ.ಹಿಂ.ಪ. ನ ಪ್ರಮುಖ ಪ್ರಜ್ವಲ್ ವೇಣೂರು ಧನ್ಯವಾದ ವಿತ್ತರು. ಉಮೇಶ ನಡ್ತಿಕಲ್ಲು ಕಾರ್ಯಕ್ರಮವನ್ನು ನಿರೂಪಿಸಿದರು. ಸರ್ವಾರ್ಥ ಎಸ್ ಜೈನ್ ಹಾಡಿದ ವಂದೇಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Related posts

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ‘ಸಸ್ಯ ಶ್ಯಾಮಲ’ ಜಿಲ್ಲಾ ಮಟ್ಟದ ಕಾರ್ಯಕ್ರಮದಡಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಜೀವ ವಿಮಾ ನಿಗಮ ಪ್ರತಿನಿಧಿಗಳ ಸಂಘದ ದಕ್ಷಿಣ ಮಧ್ಯವಲಯ ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ. ಎಸ್. ಲೋಕೇಶ್ ಶೆಟ್ಟಿ ಆಯ್ಕೆ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya
error: Content is protected !!