25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

ವೇಣೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಖಂಡ ಹಾಗೂ ಹಿಂದೂ ಜಾಗರಣ ವೇದಿಕೆ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆಯು ಆ.14ರಂದು ವೇಣೂರು ಶ್ರೀರಾಮ ಭಜನಾ ಮಂದಿರದಿಂದ ಹೊರಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಪಂಜನ್ನು ಹಿಡಿದು ಮೆರವಣಿಗೆಯ ಮೂಲಕ ನಡೆಯಿತು.

ಸಂಘದ ಮಂಗಳೂರು ವಿಭಾಗದ ಸಾಮರಸ್ಯ ಸಹ ಸಂಯೋಜಕ ಶಿವಪ್ರಸಾದ ಮಲೆಬೆಟ್ಟು ಇವರು ದಿಕ್ಸೂಚಿ ಭಾಷಣವನ್ನು ಮಾಡಿ ಸ್ವಾತಂತ್ರ್ಯದ ಪೂರ್ವದಲ್ಲಿ ಅಖಂಡವಾಗಿದ್ದ ಭಾರತ ತ್ರಿಖಂಡವಾದ ಕರಾಳ ದಿನದ ಸನ್ನಿವೇಶಗಳನ್ನು ನೆನಪಿಸಿ ಹಿಂದೂ ಸಮಾಜ ಸಂಘಟಿತವಾಗಿ ಜಾಗೃತವಾದಾಗ ಮಾತ್ರ ರಾಷ್ಟ್ರ ಉಳಿದೀತು ಎಂದರು.

ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ನಿರಂಜನ ನಿಟ್ಟಡೆ, ಪ್ರಮುಖರಾದ ವಿಜಯ ಗೌಡ, ಸುದರ್ಶನ್ ಕಾರಂತ್, ಸೋಮನಾಥ ಕೆ.ವಿ., ರಮೇಶ್ ಹೆಗ್ಡೆ, ದಿನೇಶ್ ಕರಿಮಣೇಲು, ಕೆ.ವೈ. ರವಿ ಭಟ್ ಇನ್ನಿತರರು ಉಪಸ್ಥಿತರಿದ್ದರು.

ವಿ.ಹಿಂ.ಪ. ನ ಪ್ರಮುಖರಾದ ಸುದೀಪ್ ಪಟವರ್ಧನ್ ಸ್ವಾಗತಿಸಿ, ರೋಹಿತ್ ಆಚಾರ್ಯ ನಡ್ತಿಕಲ್ಲು ವೈಯಕ್ತಿಕ ಗೀತೆ ಹಾಡಿದರು. ಸಂತೋಷ ಮಂಜಿಲ ಸಂಕಲ್ಪ ಬೋಧಿಸಿ, ವಿ.ಹಿಂ.ಪ. ನ ಪ್ರಮುಖ ಪ್ರಜ್ವಲ್ ವೇಣೂರು ಧನ್ಯವಾದ ವಿತ್ತರು. ಉಮೇಶ ನಡ್ತಿಕಲ್ಲು ಕಾರ್ಯಕ್ರಮವನ್ನು ನಿರೂಪಿಸಿದರು. ಸರ್ವಾರ್ಥ ಎಸ್ ಜೈನ್ ಹಾಡಿದ ವಂದೇಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Related posts

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಮಚ್ಚಿನ: ಕೃಷಿಕ ಕೃಷ್ಣಪ್ಪ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿರುವ ಮರವನ್ನು ಸರಿಸಿ ದಾರಿಯನ್ನು ಸರಿಪಡಿಸುವಂತೆ ಸ್ಥಳೀಯರ ಒತ್ತಾಯ

Suddi Udaya

‘ಭರತನಾಟ್ಯಂ’ ಜೂನಿಯರ್ ಗ್ರೇಡ್ ಪರೀಕ್ಷೆ : ಪುತ್ತೂರು ಮೂಕಾಂಬಿಕ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿ ಧೃತಿ ಎಂ. ಪಟ್ಟೂರು ಡಿಸ್ಟಿಂಕ್ಷನ್

Suddi Udaya

ಉಜಿರೆ: ಪಾಕತಜ್ಞ ಕೃಷ್ಣಮೂರ್ತಿ ರಾವ್ ನಿಧನ

Suddi Udaya
error: Content is protected !!