July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಪರೀಕ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕ ಇಲ್ಲಿ ಭಾರತ ದೇಶದ 78ನೇ ಹಾಗೂ ಸೌಖ್ಯವನ ಸಂಸ್ಥೆಯ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಗಣ್ಯರ ಉಪಸ್ಥಿತಿಯಲ್ಲಿ ವಿಜೃಂಭನೆಯಿಂದ ಆಚರಿಸಲಾಯಿತು.

ಭಾರತೀಯ ಸೇನೆಯಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಹೆಚ್ ರವರು ಧ್ವಜರೋಹಣವನ್ನು ಮಾಡಿದರು. ರಾಷ್ಟ್ರ ಗೀತೆ ಹಾಗೂ ವಂದೇ ಮಾತರಂ ಹಾಡಿನ ಮೂಲಕ ರಾಷ್ಟ್ರ ಧ್ವಜಕ್ಕೆ ಗೌರವವನ್ನು ಸಲ್ಲಿಸಲಾಯಿತು.

ನಂತರ ಆಸ್ಪತ್ರೆಯ ಕ್ಷೇಮ ಹಾಲ್‌ನಲ್ಲಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ಶಾಂತಿವನ ಟ್ರಸ್ಟ್ ಕಾರ್ಯದರ್ಶಿಗಳಾದ ಬಿ. ಸೀತಾರಾಮ ತೋಳ್ವಾಡಿತ್ತಾಯ ರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಧ್ವಜ ವಂದನೆಯನ್ನು ಮಾಡಿದ ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಹೆಚ್ ರವರು ತಮ್ಮ ಶುಭ ನುಡಿಗಳನ್ನಾಡುತ್ತಾ ದೇಶ ಪ್ರೇಮದ ಸಂದರ್ಭದಲ್ಲಿ ಭಾರತೀಯರಾದ ನಾವು ಒಗ್ಗಟ್ಟನ್ನು ಪ್ರದರ್ಶಿಸುವಲ್ಲಿ ಏಕಾಗ್ರತೆ ಮತ್ತು ಸ್ಥಿರ ಮನಸ್ಸಿನವರಾಗಿರಬೇಕೆಂದು ಹೇಳುತ್ತಾ ತನ್ನ 35 ವರ್ಷಗಳ ಸೇನೆಯಲ್ಲಿ ಅನುಭವಿಸಿದ ಮತ್ತು ಕಠಿಣ ಪರಿಸ್ಥಿತಿಗಳಲ್ಲಿ ಕರ್ತವ್ಯ ನಿರ್ವಹಿಸಿದ ಬಗ್ಗೆ ಮನಮುಟ್ಟುವಂತೆ ತಿಳಿಸಿದರು.

ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಅನುಭವಿಸಿದ ನೋವು ಮತ್ತು ಈ ಯುದ್ಧವು ಪ್ರಪಂಚದಲ್ಲಿ ಹೆಚ್ಚು ಪ್ರಾಮುಖ್ಯತೆಯನ್ನು ಪಡೆಯಲು ಭಾರತದ ಸೇನೆಯು ಅಪಾರ ಶ್ರಮ ವಹಿಸಿ ಜಯಿಸಿರುವುದು ಪ್ರಮುಖ ಕಾರಣ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹಿರಿಯರಾದ ಸದಾನಂದ ನಾಯಕ್ ರವರು ಉಪಸ್ಥಿತರಿದ್ದು ಸಭಾ ಕಾರ್ಯಕ್ರಮಕ್ಕೆ ಮೆರುಗನ್ನು ನೀಡಿದರು. ಹಿರಿಯ ಸಮಾಜ ಸೇವಕರಾದ ಇವರು ತಮ್ಮ ನೇತ್ರವನ್ನು ತನ್ನ ಕಾಲಾ ನಂತರ ದಾನ ಮಾಡುವುದಾಗಿ ವಾಗ್ದಾನ ಮಾಡಿರುತ್ತಾರೆ. ಶಾಂತಿವನ ಟ್ರಸ್ಟ್ ಕಾರ್ಯದರ್ಶಿಗಳಾದ ಸೀತಾರಾಮ ತೋತ್ಪಾಡಿತ್ತಾಯರವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸುತ್ತಾ ಧ್ವಜವಂದನೆ ಮಾಡಿದ ಜಗದೀಶ್ ರವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿ ಶುಭ ಹಾರೈಸಿದರು. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಾದ ಡಾ|| ಗೋಪಾಲ್ ಪೂಜಾರಿಯವರು ಉಪಸ್ಥಿತರಿದ್ದು ಪ್ರಸ್ತುತ ದೇಶದ ವಿದ್ಯಮಾನಗಳಲ್ಲಿ ಅಭಿವ್ಯಕ್ತ ಸ್ವಾತಂತ್ರ್ಯದ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಜಗದೀಶ್ ಹೆಚ್ ಮತ್ತು ಸದಾನಂದ್ ನಾಯಕ್ ರವರನ್ನು ಸಂಸ್ಥೆಯ ಪರವಾಗಿ ಗೌರವಿಸಲಾಯಿತು. ಡಾ|| ಶೋಭಿತ್ ಶೆಟ್ಟಿಯವರು ಉಪಸ್ಥಿತರಿದ್ದು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಆಸ್ಪತ್ರೆಯ ವ್ಯವಸ್ಥಾಪಕ ಪ್ರವೀಣ್ ಕುಮಾರ್ ರವರು ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿ ಕಾರ್ಯಕ್ರಮವನ್ನು ನಿರೂಪಿಸಿದರು. ಡಾ|| ಪೂಜಾ ಜಿ ಯವರು ವಂದಿಸಿದರು.

Related posts

ಜೂ.23 : ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಮಹೋತ್ಸವ ಸಂಭ್ರಮ: 1 ಕೋಟಿ 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಅಂತಿಮ ಸಿದ್ಧತೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಯುವನಿಧಿ ನೊಂದಣಿ ಶಿಬಿರ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಪ್ರಧಾನಿ ಮೋದಿಯವರ ಹುಟ್ಟುಹಬ್ಬ:ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದಿಂದ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ – ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Suddi Udaya
error: Content is protected !!