39.4 C
ಪುತ್ತೂರು, ಬೆಳ್ತಂಗಡಿ
April 9, 2025
ಶಾಲಾ ಕಾಲೇಜು

ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ 78 ನೇ ವರ್ಷದ ಸ್ವಾತಂತ್ರೋತ್ಸವ

ಬೆಳ್ತಂಗಡಿ :ಆ 15.ನಾವು ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದರೆ ಇದರ ಹಿಂದೆ ಸಾಕಷ್ಟು ಜನರ ಬಲಿದಾನವಿದೆ ಎಂಬುದನ್ನು ಮರೆಯುವಂತಿಲ್ಲ. ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಭಾರತದಲ್ಲಿ ಸಂಸ್ಕೃತಿ, ಭಾಷೆ ಹಾಗೂ ಧರ್ಮದಲ್ಲಿ ಸಾಕಷ್ಟು ವೈವಿಧ್ಯತೆಯನ್ನು ಕಾಣಬಹುದಾಗಿದೆ. ಆದರೂ ಕೂಡ ನಾವೆಲ್ಲ ಒಂದಾಗಿ ಏಕತೆಯಿಂದ ಭವ್ಯ ಭಾರತದಲ್ಲಿ ಬಾಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ.
ಭಾರತ ಮಾತೆಯ ಮಕ್ಕಳಾದ ನಾವೆಲ್ಲ ಎಂದಿಗೂ ಪರಸ್ಪರರ ಧರ್ಮ, ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಸಾಮರಸ್ಯದಿಂದ ಬಾಳಿದರೆ ಮಾತ್ರ ನಾವು ಶತ್ರುಗಳನ್ನು ಸೆದೆಬಡಿಯಲು ಸಾಧ್ಯವಿದೆ. ಅಲ್ಲದೇ ನಮ್ಮ ಪೂರ್ವಜರು ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟಿರುವುದು ಇಂದು ನಾವು ಧರ್ಮಕ್ಕಾಗಿ , ಭಾಷೆಗಾಗಿ ಹೋರಾಡಲಿ ಎಂದಲ್ಲ. ಬದಲಾಗಿ ಭಾರತದಲ್ಲಿ ಒಗ್ಗಟ್ಟಿನಿಂದ ಬಾಳಲಿ ಎಂದಾಗಿದೆ. ಹೀಗಾಗಿ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಭಾರತ ನಿರ್ಮಿಸಲು ಒಂದಾಗಬೇಕಿದೆ. ಸ್ವಾತಂತ್ರ್ಯ ದಿನವಾದ ಇಂದು ನಾವು ದೇಶದಲ್ಲಿ ಏಕತೆ, ಶಾಂತಿ ಹಾಗೂ ಅಭಿವೃದ್ಧಿಯನ್ನು ಸಾಧಿಸಲು ಒಂದಾಗಿ ಪ್ರತಿಜ್ಞೆ ತೊಡೋಣ ಎಂದು ಜಿಲ್ಲಾ ಕೆ ಡಿ ಪಿ ಸದಸ್ಯ ನೋಟರಿ ನ್ಯಾಯವಾದಿ ಸಂತೋಷ್ ಕುಮಾರ್ ಲೈಲಾ ನುಡಿದರು. ಅವರು ಇಂದು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ ಇಲ್ಲಿ 78 ನೇ ವರ್ಷದ ಸ್ವಾತಂತ್ರೋಸ್ಥವದ ಧ್ವಜಾರೋಹಣ ಮಾಡಿ ಮಕ್ಕಳಿಗೆ ಸಂದೇಶ ಸಾರಿದರು.
ಈ ಸಂದರ್ಬದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ, ಪಿಯೂಸಿ ಕಾಲೇಜಿನ ಪ್ರಾಚಾರ್ಯರಾದ ಸಿಸ್ಟೆರ್ , ಪಿಟಿಎ ಉಪಾದ್ಯಕ್ಷರಾದ ಜಗನ್ನಾಥ ಪುತ್ರಬೈಲು, ಹಳೆ ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾದ ನಾರಾಯಣ ಶೆಟ್ಟಿ ಉಪಸ್ಥರಿದ್ದರು.

Related posts

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ನಾರಾವಿ ಸಂತ ಪೌಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ವೇಣೂರು ಐಟಿಐಯಲ್ಲಿ ರಾಷ್ಟ್ರೀಯ/ಬಹುರಾಷ್ಟ್ರೀಯ ಕಂಪನಿಗಳಿಂದ ಕ್ಯಾಂಪಸ್ ಸಂದರ್ಶನ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya
error: Content is protected !!