July 23, 2026
ಶಾಲಾ ಕಾಲೇಜು

ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ 78 ನೇ ವರ್ಷದ ಸ್ವಾತಂತ್ರೋತ್ಸವ

ಬೆಳ್ತಂಗಡಿ :ಆ 15.ನಾವು ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದರೆ ಇದರ ಹಿಂದೆ ಸಾಕಷ್ಟು ಜನರ ಬಲಿದಾನವಿದೆ ಎಂಬುದನ್ನು ಮರೆಯುವಂತಿಲ್ಲ. ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಭಾರತದಲ್ಲಿ ಸಂಸ್ಕೃತಿ, ಭಾಷೆ ಹಾಗೂ ಧರ್ಮದಲ್ಲಿ ಸಾಕಷ್ಟು ವೈವಿಧ್ಯತೆಯನ್ನು ಕಾಣಬಹುದಾಗಿದೆ. ಆದರೂ ಕೂಡ ನಾವೆಲ್ಲ ಒಂದಾಗಿ ಏಕತೆಯಿಂದ ಭವ್ಯ ಭಾರತದಲ್ಲಿ ಬಾಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ.
ಭಾರತ ಮಾತೆಯ ಮಕ್ಕಳಾದ ನಾವೆಲ್ಲ ಎಂದಿಗೂ ಪರಸ್ಪರರ ಧರ್ಮ, ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಸಾಮರಸ್ಯದಿಂದ ಬಾಳಿದರೆ ಮಾತ್ರ ನಾವು ಶತ್ರುಗಳನ್ನು ಸೆದೆಬಡಿಯಲು ಸಾಧ್ಯವಿದೆ. ಅಲ್ಲದೇ ನಮ್ಮ ಪೂರ್ವಜರು ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟಿರುವುದು ಇಂದು ನಾವು ಧರ್ಮಕ್ಕಾಗಿ , ಭಾಷೆಗಾಗಿ ಹೋರಾಡಲಿ ಎಂದಲ್ಲ. ಬದಲಾಗಿ ಭಾರತದಲ್ಲಿ ಒಗ್ಗಟ್ಟಿನಿಂದ ಬಾಳಲಿ ಎಂದಾಗಿದೆ. ಹೀಗಾಗಿ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಭಾರತ ನಿರ್ಮಿಸಲು ಒಂದಾಗಬೇಕಿದೆ. ಸ್ವಾತಂತ್ರ್ಯ ದಿನವಾದ ಇಂದು ನಾವು ದೇಶದಲ್ಲಿ ಏಕತೆ, ಶಾಂತಿ ಹಾಗೂ ಅಭಿವೃದ್ಧಿಯನ್ನು ಸಾಧಿಸಲು ಒಂದಾಗಿ ಪ್ರತಿಜ್ಞೆ ತೊಡೋಣ ಎಂದು ಜಿಲ್ಲಾ ಕೆ ಡಿ ಪಿ ಸದಸ್ಯ ನೋಟರಿ ನ್ಯಾಯವಾದಿ ಸಂತೋಷ್ ಕುಮಾರ್ ಲೈಲಾ ನುಡಿದರು. ಅವರು ಇಂದು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ ಇಲ್ಲಿ 78 ನೇ ವರ್ಷದ ಸ್ವಾತಂತ್ರೋಸ್ಥವದ ಧ್ವಜಾರೋಹಣ ಮಾಡಿ ಮಕ್ಕಳಿಗೆ ಸಂದೇಶ ಸಾರಿದರು.
ಈ ಸಂದರ್ಬದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ, ಪಿಯೂಸಿ ಕಾಲೇಜಿನ ಪ್ರಾಚಾರ್ಯರಾದ ಸಿಸ್ಟೆರ್ , ಪಿಟಿಎ ಉಪಾದ್ಯಕ್ಷರಾದ ಜಗನ್ನಾಥ ಪುತ್ರಬೈಲು, ಹಳೆ ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾದ ನಾರಾಯಣ ಶೆಟ್ಟಿ ಉಪಸ್ಥರಿದ್ದರು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ವಿಶ್ವ ಸಂಗೀತ ದಿನಾಚರಣೆ

Suddi Udaya

ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನೆ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya
error: Content is protected !!