April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

ಪಟ್ರಮೆ: ತಾವು ಹೊತ್ತ ಕನಸಿನ ಸ್ವತಂತ್ರ ಭಾರತದ ಸ್ಥಾಪನೆಗೆ ಬೇಕಾಗಿ ಅದೆಷ್ಟೋ ತ್ಯಾಗ ಬಲಿದಾನಗಳ ಮೂಲಕ ಹೋರಾಡಿದ ಹಿರಿಯ ಮಹಾತ್ಮರೆಲ್ಲರ ನೆನೆಯುವ ದಿನ ಮತ್ತು ಅವರು ನಡೆದ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುವ ದಿನವೇ ಸ್ವಾತಂತ್ರೋತ್ಸವ ಎಂದು ಸಿಐಟಿಯು ನಾಯಕ ಬಿ.ಎಂ.ಭಟ್ ಹೇಳಿದರು.

ಅವರು ಪಟ್ರಮೆಯ ಜುಮ್ಮಾ ಮಸೀದಿಯಲ್ಲಿ ನಡೆದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಗೈದು ಮಾತಾಡುತ್ತಿದ್ದರು.

ನಮ್ಮ ಬದುಕಿನ ಮೇಲೆ ಕಾಳಜಿ ಹೊಂದಿ ಪ್ರಜಾಪ್ರಭುತ್ವ ವ್ಯವಸ್ಥೆ ತಂದು ಕೊಟ್ಟದ್ದನ್ನು ಅನುಭವಿಸಿದರೆ ಸಾಲದು, ಆ ಬದುಕನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್, ಕಾರ್ಯದರ್ಶಿ ಅನ್ಸಪ್, ಖಜಾಂಜಿ ಎನ್.ಎಸ್.ನಾಸಿರ್, ಮಹಮ್ಮದ್ ಪಿ, ಸಿಐಟಿಯು ಮುಖಂಡರಾದ ಧನಂಜಯ ಗೌಡ, ಸಿಪಿಐಎಂ ಮುಖಂಡರೂ ಮಾಜಿ ಪಂಚಾಯತು ಸದಸ್ಯರೂ ಆದ ಮಹಮ್ಮದ್ ಅನಸ್, ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರಗೀತೆ ಹಾಡಿದ ಬಳಿಕ ಮದರಸದ ಪುಟ್ಟ ವಿದ್ಯಾರ್ಥಿಗಳು ಸಾರೇ ಜಹಾಂಸೆ ಅಚ್ಚಾ ಹಾಡು ಹಾಡಿ ಗಮನ ಸೆಳೆದರು. ಮಸೀದಿಯ ಆವರಣ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು.

ಮಸೀದಿಯ ಗುರುಗಳಾದ ತಮೀಮ್ ಅನ್ಸಾರಿ ಕುಂಡಾಜೆ(ಖತೀಬರು ಪಟ್ರಮೆ) ಸ್ವಾಗತಿಸಿ, ವಂದಿಸಿದರು.

Related posts

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ಸೋಣಂದೂರು-ಪಣಕಜೆಯ ಬಿಜೆಪಿ ಮತ್ತು ಹಿಂದೂ ಸಂಘಟನೆ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸುಪ್ರೀತ್ ವಾಲಿಬಾಲ್ ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ