September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯರ ಆಶಯವನ್ನು ಎತ್ತಿ ಹಿಡಿಯಲು ಸ್ವಾತಂತ್ರೋತ್ಸವ ಪ್ರೇರಣೆಯಾಗಲಿ : ಬಿ.ಎಂ.ಭಟ್

ಪಟ್ರಮೆ: ತಾವು ಹೊತ್ತ ಕನಸಿನ ಸ್ವತಂತ್ರ ಭಾರತದ ಸ್ಥಾಪನೆಗೆ ಬೇಕಾಗಿ ಅದೆಷ್ಟೋ ತ್ಯಾಗ ಬಲಿದಾನಗಳ ಮೂಲಕ ಹೋರಾಡಿದ ಹಿರಿಯ ಮಹಾತ್ಮರೆಲ್ಲರ ನೆನೆಯುವ ದಿನ ಮತ್ತು ಅವರು ನಡೆದ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುವ ದಿನವೇ ಸ್ವಾತಂತ್ರೋತ್ಸವ ಎಂದು ಸಿಐಟಿಯು ನಾಯಕ ಬಿ.ಎಂ.ಭಟ್ ಹೇಳಿದರು.

ಅವರು ಪಟ್ರಮೆಯ ಜುಮ್ಮಾ ಮಸೀದಿಯಲ್ಲಿ ನಡೆದ 78ನೇ ಸ್ವಾತಂತ್ರೋತ್ಸವದ ಧ್ವಜಾರೋಹಣಗೈದು ಮಾತಾಡುತ್ತಿದ್ದರು.

ನಮ್ಮ ಬದುಕಿನ ಮೇಲೆ ಕಾಳಜಿ ಹೊಂದಿ ಪ್ರಜಾಪ್ರಭುತ್ವ ವ್ಯವಸ್ಥೆ ತಂದು ಕೊಟ್ಟದ್ದನ್ನು ಅನುಭವಿಸಿದರೆ ಸಾಲದು, ಆ ಬದುಕನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲೆ ಇದೆ ಎಂದರು.

ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷ ಮಹಮ್ಮದ್ ಹನೀಫ್, ಕಾರ್ಯದರ್ಶಿ ಅನ್ಸಪ್, ಖಜಾಂಜಿ ಎನ್.ಎಸ್.ನಾಸಿರ್, ಮಹಮ್ಮದ್ ಪಿ, ಸಿಐಟಿಯು ಮುಖಂಡರಾದ ಧನಂಜಯ ಗೌಡ, ಸಿಪಿಐಎಂ ಮುಖಂಡರೂ ಮಾಜಿ ಪಂಚಾಯತು ಸದಸ್ಯರೂ ಆದ ಮಹಮ್ಮದ್ ಅನಸ್, ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರಗೀತೆ ಹಾಡಿದ ಬಳಿಕ ಮದರಸದ ಪುಟ್ಟ ವಿದ್ಯಾರ್ಥಿಗಳು ಸಾರೇ ಜಹಾಂಸೆ ಅಚ್ಚಾ ಹಾಡು ಹಾಡಿ ಗಮನ ಸೆಳೆದರು. ಮಸೀದಿಯ ಆವರಣ ತಳಿರು ತೋರಣಗಳಿಂದ ಕಂಗೊಳಿಸುತ್ತಿತ್ತು.

ಮಸೀದಿಯ ಗುರುಗಳಾದ ತಮೀಮ್ ಅನ್ಸಾರಿ ಕುಂಡಾಜೆ(ಖತೀಬರು ಪಟ್ರಮೆ) ಸ್ವಾಗತಿಸಿ, ವಂದಿಸಿದರು.

Related posts

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಕುಂಟಿನಿಯ ಕಾಂಗ್ರೆಸ್ ಬೂತ್ ಸಮಿತಿಯ ಮನವಿಗೆ ಸ್ಪಂದನೆ: ಹಳೆಪೇಟೆಯಿಂದ ಕುತ್ರೋಟ್ಟು ರಸ್ತೆ ದುರಸ್ತಿ ಆರಂಭ

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya
error: Content is protected !!