22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

ಉಜಿರೆ : ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ ಆ.15 ರಂದು ಉಜಿರೆ ಸೌತ್ ಪ್ಯಾಲೆಸ್ ಹೋಟೆಲ್ ಬಳಿ ನಡೆಯಿತು.

ಉಜಿರೆ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಧ್ವಜಾರೋಹಣ ನಡೆಸಿದರು. ಉಜಿರೆ ಯು.ಎಸ್. ಅಟೋ ಚಾಲಕರ- ಮಾಲಕರ ಸಂಘದ ಅಧ್ಯಕ್ಷ ಲತೀಫ್ ಯು.ಎಚ್. ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಉಜಿರೆ, ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಅಬ್ದುಲ್ ರಝಕ್ ಸುಪ್ರೀಂ ಸೆಂಟರ್ ಉಜಿರೆ, ಶಿವಕಾಂತ ಎಸ್.ಪಿ. ಆಯಿಲ್ ಮಿಲ್ ಉಜಿರೆ, ಪ್ರಶಾಂತ್ ಜೈನ್ ಅಮೃತ್ ಸಿಲ್ಕ್ಸ್ ಉಜಿರೆ, ಆಸೀಫ್ ಅತ್ತಾಜೆ, ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್, ಸುಬ್ರಹ್ಮಣ್ಯ ಹಾಂಗ್ಯೋಐಸ್ ಕ್ರೀಮ್ ಉಜಿರೆ, ಸುಬ್ರಹ್ಮಣ್ಯ ಮನೋಹರ್ ಇಲೆಕ್ಟ್ರಾನಿಕ್ ಉಜಿರೆ, ಫಾರೂಕ್ ಹೋಟೆಲ್ ಸೌತ್ ಪ್ಯಾಲೆಸ್ ಉಜಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅತಿಥಿಗಳಾಗಿ ಉಜಿರೆ ವಲಯ ಬಿ.ಎಂ.ಎಸ್. ಅಟೋ ಚಾಲಕರ – ಮಾಲಕರ ಸಂಘದ ಅಧ್ಯಕ್ಷ ಉಮೇಶ್ ಅತ್ತಾಜೆ, ಸೂರಪ್ಪ ಗಾಂಧಿನಗರ, ದಿನೇಶ್, ಅಣ್ಣು, ಸಲೀಂ ಕುಂಟಿನಿ, ಪ್ರದೀಪ್, ಝಕರಿಯಾ, ದಿವಾಕರ ಹೆಗ್ಡೆ ಭಾಗವಹಿಸಿದ್ದರು. ಹಾಗೂ ಯು.ಎಸ್. ಅಟೋ ಚಾಲಕರ – ಮಾಲಕರ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

ಕು. ಅನನ್ಯ ಭಟ್ ಉಜಿರೆ ದೇಶ ಭಕ್ತಿ ಗೀತೆ ಹಾಗೂ ಜನಾರ್ಧನ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಗೀತೆಯನ್ನು ಹಾಡಿದರು.

Related posts

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಪಟ್ರಮೆ: ಸಂಕೇಶ ಮನೆ ನಿವಾಸಿ ಸುದೇಶ್ ನಿಧನ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

Suddi Udaya

ಮದ್ದಡ್ಕ: ವರಕಬೆ ಬಳಿ ಕಾರು ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿ

Suddi Udaya
error: Content is protected !!