23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ತುಳು ಸಂಸ್ಕೃತಿ ಪರಿಚಯಿಸುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.14ರಂದು ನಡೆಯಿತು.

ಮುಖ್ಯ ಅತಿಥಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವನರ್ತಕ ಮತ್ತು ಸಿವಿಲ್ ಇಂಜಿನಿಯರಿಂಗ್ ಉಪನ್ಯಾಸಕ ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಆಟಿ ತಿಂಗಳ ದಿನಗಳ ಬಗ್ಗೆ ತಿಳಿಸಿದರು. ಹಿರಿಯರು ಬೇಸಾಯ ಮಾಡುತ್ತಿದ್ದ ಕಾಲವನ್ನು ನೆನಪಿಸಿದರು. ತುಳುನಾಡ ಕ್ಯಾಲೆಂಡರ್’ನ ಸೊಗಡು, ಆಟಿ ಕಳಂಜದ ವೈಶಿಷ್ಟ್ಯ, ದೈವ- ದೇವರುಗಳ ಕೆಲಸ ಕಾರ್ಯವನ್ನು ವಿವರಿಸಿದರು. ಆಟಿಯ ಕುರಿತಾದ ಹಾಡುಗಳನ್ನು ಹಾಡಿ ಸಾಂಪ್ರದಾಯಿಕ ತುಳು ಹಾಡುಗಳ ವೈಶಿಷ್ಟ್ಯವನ್ನು ವಿವರಿಸಿದರು.

ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಆಟಿ ತಿಂಗಳ ಬಗೆಗಿನ ಅರಿವಿನ ಅಗತ್ಯದ ಬಗ್ಗೆ ತಿಳಿಸಿದರು.

ಮನಸ್ವಿ ಅತಿಥಿ ಪರಿಚಯ ನೀಡಿದರು. ಜ್ಞಾನ್ ಅನ್ವೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೀಕ್ಷಾ ಸ್ವಾಗತಿಸಿ, ಅದೀಶ್ ವಂದಿಸಿ, ಮಧುಶ್ರೀ ನಿರೂಪಿಸಿದರು.

ಅತಿಥಿಗಳನ್ನು ಚೆಂಡೆ ವಾದನದೊಂದಿಗೆ ಸ್ವಾಗತಿಸಿ, ವೀಳ್ಯದೆಲೆ ಅಡಿಕೆ ನೀಡಿ, ವೇದಿಕೆಗೆ ಬರಮಾಡಿಕೊಂಡದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ತುಳು ಹಾಡು, ತುಳು ಗಾದೆಮಾತುಗಳು, ಒಗಟುಗಳು ಮತ್ತು ನೃತ್ಯ ಪ್ರಸ್ತುತಪಡಿಸಿದರು.

ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಹಾಗೂ ಹಳೆಯ ಕಾಲದ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಾಲೋಚನಾ ಸಭೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya
error: Content is protected !!