32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ತುಳು ಸಂಸ್ಕೃತಿ ಪರಿಚಯಿಸುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.14ರಂದು ನಡೆಯಿತು.

ಮುಖ್ಯ ಅತಿಥಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವನರ್ತಕ ಮತ್ತು ಸಿವಿಲ್ ಇಂಜಿನಿಯರಿಂಗ್ ಉಪನ್ಯಾಸಕ ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಆಟಿ ತಿಂಗಳ ದಿನಗಳ ಬಗ್ಗೆ ತಿಳಿಸಿದರು. ಹಿರಿಯರು ಬೇಸಾಯ ಮಾಡುತ್ತಿದ್ದ ಕಾಲವನ್ನು ನೆನಪಿಸಿದರು. ತುಳುನಾಡ ಕ್ಯಾಲೆಂಡರ್’ನ ಸೊಗಡು, ಆಟಿ ಕಳಂಜದ ವೈಶಿಷ್ಟ್ಯ, ದೈವ- ದೇವರುಗಳ ಕೆಲಸ ಕಾರ್ಯವನ್ನು ವಿವರಿಸಿದರು. ಆಟಿಯ ಕುರಿತಾದ ಹಾಡುಗಳನ್ನು ಹಾಡಿ ಸಾಂಪ್ರದಾಯಿಕ ತುಳು ಹಾಡುಗಳ ವೈಶಿಷ್ಟ್ಯವನ್ನು ವಿವರಿಸಿದರು.

ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಆಟಿ ತಿಂಗಳ ಬಗೆಗಿನ ಅರಿವಿನ ಅಗತ್ಯದ ಬಗ್ಗೆ ತಿಳಿಸಿದರು.

ಮನಸ್ವಿ ಅತಿಥಿ ಪರಿಚಯ ನೀಡಿದರು. ಜ್ಞಾನ್ ಅನ್ವೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೀಕ್ಷಾ ಸ್ವಾಗತಿಸಿ, ಅದೀಶ್ ವಂದಿಸಿ, ಮಧುಶ್ರೀ ನಿರೂಪಿಸಿದರು.

ಅತಿಥಿಗಳನ್ನು ಚೆಂಡೆ ವಾದನದೊಂದಿಗೆ ಸ್ವಾಗತಿಸಿ, ವೀಳ್ಯದೆಲೆ ಅಡಿಕೆ ನೀಡಿ, ವೇದಿಕೆಗೆ ಬರಮಾಡಿಕೊಂಡದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ತುಳು ಹಾಡು, ತುಳು ಗಾದೆಮಾತುಗಳು, ಒಗಟುಗಳು ಮತ್ತು ನೃತ್ಯ ಪ್ರಸ್ತುತಪಡಿಸಿದರು.

ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಹಾಗೂ ಹಳೆಯ ಕಾಲದ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

Related posts

ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಅಳದಂಗಡಿ ಅರಮನೆಗೆ ಭೇಟಿ ನೀಡಿ ಅರಸರಿಂದ ಆಶೀರ್ವಾದ ಪಡೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya
error: Content is protected !!