ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

ಉಜಿರೆ: ಇಲ್ಲಿನ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ತುಳು ಸಂಸ್ಕೃತಿ ಪರಿಚಯಿಸುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆ.14ರಂದು ನಡೆಯಿತು.

ಮುಖ್ಯ ಅತಿಥಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವನರ್ತಕ ಮತ್ತು ಸಿವಿಲ್ ಇಂಜಿನಿಯರಿಂಗ್ ಉಪನ್ಯಾಸಕ ಡಾ. ರವೀಶ್ ಪಡುಮಲೆ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಆಟಿ ತಿಂಗಳ ದಿನಗಳ ಬಗ್ಗೆ ತಿಳಿಸಿದರು. ಹಿರಿಯರು ಬೇಸಾಯ ಮಾಡುತ್ತಿದ್ದ ಕಾಲವನ್ನು ನೆನಪಿಸಿದರು. ತುಳುನಾಡ ಕ್ಯಾಲೆಂಡರ್’ನ ಸೊಗಡು, ಆಟಿ ಕಳಂಜದ ವೈಶಿಷ್ಟ್ಯ, ದೈವ- ದೇವರುಗಳ ಕೆಲಸ ಕಾರ್ಯವನ್ನು ವಿವರಿಸಿದರು. ಆಟಿಯ ಕುರಿತಾದ ಹಾಡುಗಳನ್ನು ಹಾಡಿ ಸಾಂಪ್ರದಾಯಿಕ ತುಳು ಹಾಡುಗಳ ವೈಶಿಷ್ಟ್ಯವನ್ನು ವಿವರಿಸಿದರು.

ಮುಖ್ಯೋಪಾಧ್ಯಾಯಿನಿ ವಿದ್ಯಾಲಕ್ಷ್ಮಿ ನಾಯಕ್, ಆಟಿ ತಿಂಗಳ ಬಗೆಗಿನ ಅರಿವಿನ ಅಗತ್ಯದ ಬಗ್ಗೆ ತಿಳಿಸಿದರು.

ಮನಸ್ವಿ ಅತಿಥಿ ಪರಿಚಯ ನೀಡಿದರು. ಜ್ಞಾನ್ ಅನ್ವೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ದೀಕ್ಷಾ ಸ್ವಾಗತಿಸಿ, ಅದೀಶ್ ವಂದಿಸಿ, ಮಧುಶ್ರೀ ನಿರೂಪಿಸಿದರು.

ಅತಿಥಿಗಳನ್ನು ಚೆಂಡೆ ವಾದನದೊಂದಿಗೆ ಸ್ವಾಗತಿಸಿ, ವೀಳ್ಯದೆಲೆ ಅಡಿಕೆ ನೀಡಿ, ವೇದಿಕೆಗೆ ಬರಮಾಡಿಕೊಂಡದ್ದು ವಿಶೇಷವಾಗಿತ್ತು. ವಿದ್ಯಾರ್ಥಿಗಳು ತುಳು ಹಾಡು, ತುಳು ಗಾದೆಮಾತುಗಳು, ಒಗಟುಗಳು ಮತ್ತು ನೃತ್ಯ ಪ್ರಸ್ತುತಪಡಿಸಿದರು.

ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಹಾಗೂ ಹಳೆಯ ಕಾಲದ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿತ್ತು.

Related posts

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಉಜಿರೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಯುವದಿನ ಸಂಪನ್ನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya
error: Content is protected !!