23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಕ್ಸೆಲ್ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 78 ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಅತ್ಯಂತ ವಿನೂತನವಾಗಿ ಆಚರಿಸಲಾಯಿತು.

ವಿಧಾನ ಪರಿಷತ್ ಶಾಸಕ‌ಕೆ. ಪ್ರತಾಪಸಿಂಹ ನಾಯಕ್ ಧ್ವಜಾರೋಹಣ ನೆರವೇರಿಸಿದ ಸ್ವಾತಂತ್ರೋತ್ಸವದ ಸಂದೇಶ ನೀಡಿದರು.

ನಮ್ಮ‌ನಡಿಗೆ ಅರಿವಿನಡೆಗೆ ಎಂಬ ಧ್ಯೇಯದಡಿ ವೈವಿದ್ಯಮಯ ಸಿಂಗಾರಿ ಮೇಳ,ಹುಲಿವೇಷ ಮತ್ತು ಉದ್ಘೋಷಗಳ ಮೂಲಕ ಎಕ್ಸೆಲ್ ಕಾಲೇಜಿನಿಂದ ಶ್ರೀ ರತ್ನತ್ರಯ ಜೈನ ತೀರ್ಥ ಕ್ಷೇತ್ರದವರೆಗೆ ಬ್ರಹತ್ ಪಥ ಸಂಚಲನ ನಡೆಯಿತು.ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು.

ಅಪರಾಹ್ನ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ನಡೆದ ರಕ್ಷಕ ನಮನ ಕಾರ್ಯಕ್ರಮದಲ್ಲಿ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಬೆಸ್ಟ್ ಪೌಂಢೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭಾಗವಹಿಸಿದ್ದರು.

ಉದಯವಾಣಿ,ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ಉಪಾಧ್ಯಕ್ಷ ರಾಮಚಂದ್ರ ವಮಿಜಾರು ಅಭಿನಂದನಾ ಭಾಷಣ ಮಾಡಿದರು.

ಭಾರತೀಯ ಸೇನೆಯ ಯೋಧರು,ಆರಕ್ಷಕ ಪಡೆಗಳಲ್ಲಿ ರಕ್ಷಕರಾದ ಎಕ್ಸೆಲ್ ವಿದ್ಯಾರ್ಥಿಗಳ ಹೆತ್ತವರಿಗೆ ಸನ್ಮಾನ ಹಾಗೂ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಗೌರವ ಉಪಸ್ಥಿತಿಯಲ್ಲಿ ಎಕ್ಸೆಲ್ ಕಾಲೇಜಿನ ಕಾರ್ಯದರ್ಶಿ ಅಭಿರಾಮ್ ಬಿ.ಯಸ್,ಎಕ್ಸೆಲ್ ಕಾಲೇಜಿನ ಅರಮಲೆಬೆಟ್ಟ ಕ್ಯಾಂಪಸ್ ಇನ್ ಚಾರ್ಜ್ ಪ್ರಿನ್ಸಿಪಾಲ್ ಡಾ.ಪ್ರಜ್ವಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು.

Related posts

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ ರವರ ಉಚಿತ ಯಕ್ಷಧ್ರುವ ಯಕ್ಷ ಶಿಕ್ಷಣ ತರಗತಿ ಉದ್ಘಾಟನೆ

Suddi Udaya

ನಾವೂರು : ಹಾಲು ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!