September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ, ಶಿಕ್ಷಕ-ರಕ್ಷಕ ಸಭೆಯು ಕಾಲೇಜು ಸಭಾಂಗಣದಲ್ಲಿ ಜರುಗಿತು.

ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ ರವರು ಪ್ರಸ್ತಾವನೆಯನ್ನು ಮಂಡಿಸಿ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳನ್ನು ಮತ್ತು ಸದಸ್ಯರು ಆಯ್ಕೆ ಮಾಡಿದರು.ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಪೋಷಕರಿಗಿದ್ದ ಎಲ್ಲಾ ಸಂದೇಹಗಳಿಗೆ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ, ಸಂಸ್ಥೆಯ ಕಾರ್ಯನಿರ್ವಾಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ರವರು ಸಮಾಧಾನಕರವಾದ ರೀತಿಯಲ್ಲಿ ಸಮಾಲೋಚನೆಯನ್ನು ನಡೆಸಿದರು. ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ಪೂಜಾರಿ ಸಂಸ್ಥೆಯ ಪರಿಶ್ರಮವನ್ನು ಶ್ಲಾಘಿಸಿ ಶುಭವನ್ನು ಹಾರೈಸಿದರು. ಉಪಾಧ್ಯಕ್ಷ ರಾಗಿ ಮಹಾಂತೇಶ್ ವಾಲಿಕರ್ ಮತ್ತು ಸತೀಶ್ ಪೂಜಾರಿ,
ಕೋಶಾಧಿಕಾರಿಯಾಗಿ ಅಶ್ವಥ್ ನಾರಾಯಣ, ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಉಪನ್ಯಾಸಕರ ಮತ್ತು ಹೆತ್ತವರ ಜವಾಬ್ದಾರಿಯನ್ನು ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ ಎಚ್ ರವರು ಮನೋಜ್ಞವಾಗಿ ಸಭಾಸದರಿಗೆ ತಲುಪಿಸಿದರು. ಈ ಕಾರ್ಯಕ್ರಮವನ್ನು ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಸುವರ್ಣ ಲತಾ ನಿರೂಪಿಸಿ, ಕುಮಾರಿ ಸುಶ್ಮಿತಾ ರಸಾಯನಶಾಸ್ತ್ರ ಉಪನ್ಯಾಸಕಿ ಸ್ವಾಗತಿಸಿದರು. ವಿನಯ್ ಎಂ ಎಸ್ ಗಣಕಶಾಸ್ತ್ರ ಉಪನ್ಯಾಸಕರು ವಂದಿಸಿದರು.

Related posts

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya
error: Content is protected !!