25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ, ಶಿಕ್ಷಕ-ರಕ್ಷಕ ಸಭೆಯು ಕಾಲೇಜು ಸಭಾಂಗಣದಲ್ಲಿ ಜರುಗಿತು.

ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ ರವರು ಪ್ರಸ್ತಾವನೆಯನ್ನು ಮಂಡಿಸಿ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳನ್ನು ಮತ್ತು ಸದಸ್ಯರು ಆಯ್ಕೆ ಮಾಡಿದರು.ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಪೋಷಕರಿಗಿದ್ದ ಎಲ್ಲಾ ಸಂದೇಹಗಳಿಗೆ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ, ಸಂಸ್ಥೆಯ ಕಾರ್ಯನಿರ್ವಾಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ರವರು ಸಮಾಧಾನಕರವಾದ ರೀತಿಯಲ್ಲಿ ಸಮಾಲೋಚನೆಯನ್ನು ನಡೆಸಿದರು. ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ಪೂಜಾರಿ ಸಂಸ್ಥೆಯ ಪರಿಶ್ರಮವನ್ನು ಶ್ಲಾಘಿಸಿ ಶುಭವನ್ನು ಹಾರೈಸಿದರು. ಉಪಾಧ್ಯಕ್ಷ ರಾಗಿ ಮಹಾಂತೇಶ್ ವಾಲಿಕರ್ ಮತ್ತು ಸತೀಶ್ ಪೂಜಾರಿ,
ಕೋಶಾಧಿಕಾರಿಯಾಗಿ ಅಶ್ವಥ್ ನಾರಾಯಣ, ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಉಪನ್ಯಾಸಕರ ಮತ್ತು ಹೆತ್ತವರ ಜವಾಬ್ದಾರಿಯನ್ನು ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ ಎಚ್ ರವರು ಮನೋಜ್ಞವಾಗಿ ಸಭಾಸದರಿಗೆ ತಲುಪಿಸಿದರು. ಈ ಕಾರ್ಯಕ್ರಮವನ್ನು ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಸುವರ್ಣ ಲತಾ ನಿರೂಪಿಸಿ, ಕುಮಾರಿ ಸುಶ್ಮಿತಾ ರಸಾಯನಶಾಸ್ತ್ರ ಉಪನ್ಯಾಸಕಿ ಸ್ವಾಗತಿಸಿದರು. ವಿನಯ್ ಎಂ ಎಸ್ ಗಣಕಶಾಸ್ತ್ರ ಉಪನ್ಯಾಸಕರು ವಂದಿಸಿದರು.

Related posts

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya

ಅರಸಿನಮಕ್ಕಿ: ಉಪರಡ್ಕದಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ಡಿಕ್ಕಿ

Suddi Udaya

ಎಕ್ಸೆಲ್ ಗೆ ಎಸ್ ಡಿ ಎಂ ನ ಎಕ್ಸ್ ಪಿರಿಯ ವಿಜ್ಞಾನ ಮೇಳದಲ್ಲಿ ಚಾಂಪಿಯನ್ ಶಿಪ್

Suddi Udaya

ಕಾಂತರಾಜ್ ವರದಿ ಬಿಡುಗಡೆ, ಮುಸ್ಲಿಮ್ ಮೀಸಲಾತಿ ಶೇ.8ಕ್ಕೆ ಏರಿಸಲು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಎಂಎಲ್‌ಸಿ ಹರೀಶ್ ಕುಮಾರ್‌ಗೆ ಮನವಿ

Suddi Udaya
error: Content is protected !!