ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಮತ್ತು ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇವರ ವತಿಯಿಂದ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ ಆ.14 ರಂದು ಕೊಕ್ಕಡ ಜಂಕ್ಷನ್ ನಿಂದ ಶ್ರೀರಾಮ ಭಜನಾ ಮಂದಿರದವರೆಗೆ ನಡೆಯಿತು.

ಅಧ್ಯಕ್ಷತೆಯನ್ನು ಕಿಶೋರ್ ಪೋಯ್ಯೋಳೆ ವಹಿಸಿದರು. ಕಡಬ ಶ್ರೀ ಸರಸ್ವತಿ ವಿದ್ಯಾಲಯ ಸಂಚಾಲಕರು ವೆಂಕಟ್ರಮಣ ರಾವ್ ಮುಖ್ಯ ಭಾಷಣಕರರಾಗಿ ಆಗಮಿಸಿದ್ದರು.


ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್ ಹಿತ್ತಿಲು, ಉದ್ಯಮಿ ಬಾಲಕೃಷ್ಣ ನೈಮಿಷ ಉಪಸ್ಥಿತರಿದ್ದರು.


ಕೊಕ್ಕಡ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಆಳಂಬಿಲ ಸ್ವಾಗತಿಸಿ, ಸಚಿನ್ ಬಜ ಧನ್ಯವಾದವಿತ್ತರು. ಕೇಶವ ಹಳ್ಳಿಂಗೇರಿ ನಿರೂಪಿಸಿದರು.

Leave a Comment

error: Content is protected !!