ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

Suddi Udaya

Updated on:

ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ರೈ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಅವರಿಗೆ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭ ಸಂಘದ ಉಪಾಧ್ಯಕ್ಷ ಶಿವರಾಮ್ ನಾಯ್ಕ್ ಸಂಘದ ನಿರ್ದೇಶಕರಾದ ಶ್ರೀಯುತ ಪ್ರಸನ್ನ ಗೌಡ, ಪಾರ್ಶ್ಶ್ವನಾಥ್ ಜೈನ್, ಶ್ರೀಮತಿ ಲಿಡಿಯಾ ಬ್ರಾಗ್ಸ್, ಶ್ರೀಮತಿ ಸವಿತಾ ವೆಂಕಟೇಶ್,ಮೋಹನ್ ಗೌಡ ಅಜಿರ, ಸುರೇಶ್ ಸುಣ್ಣಾಜೆ, ಶೇಖರ್ ಕುಂಡಡ್ಕ, ಅರುಣ್ ಬಜಕ್ಕಳ, ಉಪಸ್ಥಿತರಿದ್ದರು.

Leave a Comment

error: Content is protected !!