September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ನಾಳ ಅಂಗನವಾಡಿ ಕೇಂದ್ರದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆ.15 ರಂದು ಜರುಗಿತು.
ಸ್ಥಳೀಯ ಹಿರಿಯರಾದ ಪುರಂದರ ರೈ ನಾಳ ಧ್ವಜಾರೋಹಣ ನೆರವೇರಿಸಿದರು.

ರಾಜೇಶ್ ಪೆಂರ್ಬುಡ ಮಾತನಾಡುತ್ತಾ ದೇಶ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತದ ದೇಶದ ಪ್ರಮುಖ ಸ್ಥಾನ ಪಡೆದಿದೆ.ವಿಪರ್ಯಾಸವೆಂದರೆ ಭಯೋತ್ಪಾದಕ ಸಂಘಟನೆಗಳು ನಮ್ಮ ದೇಶದಕ್ಕೆ ಕಂಟಕವಾಗಿದೆ.ಭಾರತ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಅಭಿವೃದ್ಧಿಗೆ ಕೈಜೋಡಿಸಿದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶದ ಭವಿಷ್ಯಕ್ಕೆ ಜಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.


ಮಮತಾ ಆಳ್ವ ನಾಳ, ಸುಗುಣ ಆಳ್ವ ನಾಳ, ಇಸ್ಮಾಯಿಲ್ ಪಲ್ಲಾದೆ, ಸೋಮಪ್ಪ ಗೌಡ ಕುಬಾಯ, ಲೋಕೇಶ್ ನಾಳ, ಭವಾನಿ ಅಧ್ಯಕ್ಷರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ನಾಳ,ತಸ್ನೀಮ ಶಮೀರ್,ನೀಲಯ್ಯ ಪೂಜಾರಿ,ದಿನೇಶ್ ಗೌಡ ಬಿ,ಮಕ್ಕಳ ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಮೋಹಿನಿ ಸಹಕರಿಸಿದರು.

Related posts

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ಧರ್ಮಸ್ಥಳದಲ್ಲಿ “ಕೆಸರ್‌ಡ್ ಒಂಜಿ ದಿನ”

Suddi Udaya

ಕೊಯ್ಯೂರುನಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬ: 5 ದಿನವಾದರೂ ದುರಸ್ತಿಯಾಗದ ವಿದ್ಯುತ್ ಕಂಬ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಸಲ್ಮತ್ ಗೆ ಸಂಸ್ಕೃತದಲ್ಲಿ 99 ಅಂಕ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!