23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಮುಹಿಯುದ್ದೀನ್ ಜುಮಾ ಮಸೀದಿ ಮುರ – ನಾವೂರು ಇಲ್ಲಿನ ನೂರುಲ್ ಹುದಾ ಮದರಸ ವಠಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಬಹಳ ವಿಜೃಂಭಣೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಕಮಿಟಿ ಅಧ್ಯಕ್ಷರಾದ ಎನ್. ಕೆ ಹಸೈನಾರ್ ವಹಿಸಿದ್ದರು. ಎಂಜೆಎಂ ಮುರ ಇಲ್ಲಿನ ಖತೀಬ್ ಬಶೀರ್ ಸಅದಿ ದುಆ ಹಾಗೂ ಸಂದೇಶ ಭಾಷಣ ಮಾಡುತ್ತಾ ಹಲವು ಮಂದಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು,ಅದನ್ನು ಉಳಿಸಿಕೊಳ್ಳಲು ಯಾವ ತ್ಯಾಗಕ್ಕೂ ನಾವು ಸನ್ನದ್ಧರಾಗಬೇಕಿಗಿದೆ ಎಂದರು.

ನೂರುಲ್ ಹುದಾ ಮದರಸದ ಸದರ್ ಮುಅಲ್ಲಿಮ್ ಅಬ್ದುಲ್ ಹಮೀದ್ ಝುಹರಿ, ಮುಹಿಯುದ್ದೀನ್ ಜುಮಾ ಮಸೀದಿ ಪ್ರ.ಕಾರ್ಯದರ್ಶಿ ಅಬ್ದುಲ್ ಖಾದರ್ ನಾವೂರು ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ಸಭೆಯ ಮುಂದಿಟ್ಟರು.

ವೇದಿಕೆಯಲ್ಲಿ ಜಮಾಅತ್ ಉಪಾಧ್ಯಕ್ಷ ಮುಹಮ್ಮದ್ ಮುಸ್ಲಿಯಾರ್, ಕೋಶಾಧಿಕಾರಿ ಇಬ್ರಾಹಿಂ ಎನ್. ಎ, ಕಾರ್ಯದರ್ಶಿಗಳಾದ ಸುಲೈಮಾನ್ ಪಿ.ವೈ, ಸ್ವಾದಿಕ್ ನಾವೂರು, ಜಮಾಅತ್ ಕಮಿಟಿ ಸದಸ್ಯರುಗಳಾದ ಹಸನಬ್ಬ ನಿoರ್ದಿ, ಮುಹಮ್ಮದ್ ಪಿ.ಎಂ ಮುರ, ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಇಸ್ಮಾಯಿಲ್ ಕಿರ್ನಡ್ಕ, ಪಿ.ಯು ಅಲಿಕುಂಞ ಸಖಾಫಿ, ಮದರಸ ಅಧ್ಯಾಪಕರಾದ ಹನೀಫ್ ಸಖಾಫಿ, ಸಿದ್ದೀಕ್ ಸಖಾಫಿ, ಷರೀಫ್ ಮುಸ್ಲಿಯಾರ್, ಖಾಲಿದ್ ಮದನಿ, ಎಂಜೆಎಂ ನ ಎಲ್ಲಾ ಅಂಗಸಂಸ್ಥೆಗಳ ನಾಯಕರು, ಮದರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮದರಸ ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧಾ ವಿಜೇತರಿಗೆ ಬೆಳ್ತಂಗಡಿ ಇಮೇಜ್ ಮೊಬೈಲ್ ಮಾಲಕರಾದ ಅಝರ್ ಎನ್. ಕೆ ಪ್ರಶಸ್ತಿ ಪ್ರಧಾನ ಮಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಿ ಸಂಭ್ರಮಿಸಲಾಯಿತು.

Related posts

ನಾವೂರುನಲ್ಲಿ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ: ಪಂದಳರಾಜ ಶಶಿಕುಮಾರ ವರ್ಮ ದಂಪತಿ ಭಾಗಿ

Suddi Udaya

ಕೊಕ್ಕಡ ಜೇಸಿಗೆ ಸಮ್ಮೇಳನ ಪ್ರಶಸ್ತಿ: ಅಕ್ಷರ ದೀವಿಗೆ ವಲಯದ ಅತ್ಯುತ್ತಮ ಕಾರ್ಯಕ್ರಮ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya
error: Content is protected !!