25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಮುಹಿಯುದ್ದೀನ್ ಜುಮಾ ಮಸೀದಿ ಮುರ – ನಾವೂರು ಇಲ್ಲಿನ ನೂರುಲ್ ಹುದಾ ಮದರಸ ವಠಾರದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಬಹಳ ವಿಜೃಂಭಣೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಕಮಿಟಿ ಅಧ್ಯಕ್ಷರಾದ ಎನ್. ಕೆ ಹಸೈನಾರ್ ವಹಿಸಿದ್ದರು. ಎಂಜೆಎಂ ಮುರ ಇಲ್ಲಿನ ಖತೀಬ್ ಬಶೀರ್ ಸಅದಿ ದುಆ ಹಾಗೂ ಸಂದೇಶ ಭಾಷಣ ಮಾಡುತ್ತಾ ಹಲವು ಮಂದಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು,ಅದನ್ನು ಉಳಿಸಿಕೊಳ್ಳಲು ಯಾವ ತ್ಯಾಗಕ್ಕೂ ನಾವು ಸನ್ನದ್ಧರಾಗಬೇಕಿಗಿದೆ ಎಂದರು.

ನೂರುಲ್ ಹುದಾ ಮದರಸದ ಸದರ್ ಮುಅಲ್ಲಿಮ್ ಅಬ್ದುಲ್ ಹಮೀದ್ ಝುಹರಿ, ಮುಹಿಯುದ್ದೀನ್ ಜುಮಾ ಮಸೀದಿ ಪ್ರ.ಕಾರ್ಯದರ್ಶಿ ಅಬ್ದುಲ್ ಖಾದರ್ ನಾವೂರು ಸ್ವಾತಂತ್ರ್ಯ ಹೋರಾಟಗಾರರ ಚರಿತ್ರೆಯನ್ನು ಸಭೆಯ ಮುಂದಿಟ್ಟರು.

ವೇದಿಕೆಯಲ್ಲಿ ಜಮಾಅತ್ ಉಪಾಧ್ಯಕ್ಷ ಮುಹಮ್ಮದ್ ಮುಸ್ಲಿಯಾರ್, ಕೋಶಾಧಿಕಾರಿ ಇಬ್ರಾಹಿಂ ಎನ್. ಎ, ಕಾರ್ಯದರ್ಶಿಗಳಾದ ಸುಲೈಮಾನ್ ಪಿ.ವೈ, ಸ್ವಾದಿಕ್ ನಾವೂರು, ಜಮಾಅತ್ ಕಮಿಟಿ ಸದಸ್ಯರುಗಳಾದ ಹಸನಬ್ಬ ನಿoರ್ದಿ, ಮುಹಮ್ಮದ್ ಪಿ.ಎಂ ಮುರ, ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಇಸ್ಮಾಯಿಲ್ ಕಿರ್ನಡ್ಕ, ಪಿ.ಯು ಅಲಿಕುಂಞ ಸಖಾಫಿ, ಮದರಸ ಅಧ್ಯಾಪಕರಾದ ಹನೀಫ್ ಸಖಾಫಿ, ಸಿದ್ದೀಕ್ ಸಖಾಫಿ, ಷರೀಫ್ ಮುಸ್ಲಿಯಾರ್, ಖಾಲಿದ್ ಮದನಿ, ಎಂಜೆಎಂ ನ ಎಲ್ಲಾ ಅಂಗಸಂಸ್ಥೆಗಳ ನಾಯಕರು, ಮದರಸ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮದರಸ ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಸ್ಪರ್ಧಾ ವಿಜೇತರಿಗೆ ಬೆಳ್ತಂಗಡಿ ಇಮೇಜ್ ಮೊಬೈಲ್ ಮಾಲಕರಾದ ಅಝರ್ ಎನ್. ಕೆ ಪ್ರಶಸ್ತಿ ಪ್ರಧಾನ ಮಾಡಿದರು. ಕಾರ್ಯಕ್ರಮದ ಕೊನೆಯಲ್ಲಿ ಸಿಹಿತಿಂಡಿ ವಿತರಿಸಿ ಸಂಭ್ರಮಿಸಲಾಯಿತು.

Related posts

ಆರಂಬೋಡಿಯ ಚೈತ್ರಾ ವಿ. ಪೂಜಾರಿರವರು ವಿಟ್ಲ ಕನ್ಯಾನ ಸ.ಪ್ರ. ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆ ಶಿಬಿರ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya
error: Content is protected !!