24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಬೆಳ್ತಂಗಡಿ : ನೇತಾಜಿ ಸುಭಾಷ್ ಚಂದ್ರಬೋಸ್ ಅವಾಸೀಯ ವಿದ್ಯಾಲಯ ಮುಗುಳಿ ಬೆಳ್ತಂಗಡಿಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ,ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು SKDRDP ನಿವೃತ್ತ ಪ್ರಾದೇಶಿಕ ನಿರ್ದೇಶಕರು ಜಯಶಂಕರ್ ಶರ್ಮ ನೆರವೇರಿಸಿದರು. ಬಳಿಕ ಉದ್ಯಮಿ ಬಸವರಾಜ್ ಮತ್ತು ಉದ್ಯಮಿ ಮೋಹನ್ ಚೌಧರಿಗೆ ವಿದ್ಯಾರ್ಥಿಗಳಿಂದ ಸನ್ಮಾನಿಸಲಾಯಿತು‌‌‌. 100 ವಿದ್ಯಾರ್ಥಿಗಳಿಗೆ ಬ್ಯಾಗ್, ಪೆನ್ಸಿಲ್, ಸ್ಕೇಚ್ ಪೇನ್, ರಬ್ಬರ್ , ಪೇನ್ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನಿಂದ ವಿತರಿಸಲಾಯಿತು.

ಉದ್ಯಮಿ ಬಸವರಾಜ್ , ತಾಲೂಕು ಪಂಚಾಯತ್ ಮ್ಯಾನೇಜರ್ ಪ್ರಶಾಂತ್, SKDRDP ನಿವೃತ್ತ ಪ್ರಾದೇಶಿಕ ನಿರ್ದೇಶಕರು ಶ್ರೀ ಜಯಶಂಕರ್ ಶರ್ಮ, ಬೆಳ್ತಂಗಡಿ ರೋಟರಿ ಕಾರ್ಯದರ್ಶಿ ಸಂದೇಶ್, ನಿವೃತ್ತ ಸೈನಿಕ ಕುಲದೀಪ್ ಸಿಂಗ್, ಮುಖ್ಯೋಪಾಧ್ಯಾಯ ವಿಠಲ್ ಬಿ, ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾ ಕೇಸರಿ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವನಿ ಶಂಕರ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ವಿಷ್ಣು ಸೇವಾ ಸಮಾಜ ಮೋಹನ್ ಚೌದರಿ,ಉಜಿರೆ ಸಂಧ್ಯಾ ಫ್ರೇಶ್ ಆಡಳಿತಾಧಿಕಾರಿ ಅರ್ಚನಾ ಪೈ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕರಾದ ಮೋಹನ್ ಕುಮಾರ್ ಮತ್ತು ರಾಜೇಶ್ ಪೈ ಹಾಗೂ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ಸದಸ್ಯರು ಹಾಗೂ ಉಜಿರೆ ಸಂಧ್ಯಾ ಫ್ರೇಶ್ ಸಿಬ್ಬಂದಿಗಳು ಭಾಗಿಯಾಗಿದ್ದರು.

Related posts

ಬೆಳ್ತಂಗಡಿ: ತಾಳೆ ಬೆಳೆಯ ಬಗ್ಗೆ ಮಾಹಿತಿ

Suddi Udaya

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಳಿಯ : ಕೊಜಪ್ಪಾಡಿ ಶ್ರೀ ನಾಗಬ್ರಹ್ಮ ಸ್ವಾಮಿ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಅಳದಂಗಡಿ ಗ್ರಾಮ ಸಭೆ: ಅಂಗಡಿ ಬಾಡಿಗೆ ಬಾಕಿದಾರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕೆ.ಎಸ್.ಟಿ.ಎ ವೇಣೂರು ಟೈಲರ್ಸ್ ವಲಯದ ಮಹಾಸಭೆ

Suddi Udaya
error: Content is protected !!