30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಭಾರತಿಯ ಜೈನ್ ಮಿಲನ್ ವಲಯ 8 ರ ವಾರ್ಷಿಕ ಮಹಾಸಭೆ ಬೆಂಗಳೂರಿನ ಮಂಜುನಾಥ ಸ್ವಾಮಿ ಕಲಾ ಮಂಟಪ ದಲ್ಲಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ವೀರ್ ಡಿ.ಸುರೇಂದ್ರಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಸಾಮೂಹಿಕ ಪಂಚ ನಮಸ್ಕಾರ ದೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಉಪಾಧ್ಯಕ್ಷರಾದ ವೀರ್ ಸುದರ್ಶನ್ ಜೈನ್,ನಿರ್ದೇಶಕರಾದ ವೀರ್ ಬಿ. ಸೋಮ ಶೇಖರ ಶೆಟ್ಟಿ ಹಾಗೂ ಇತರ ಉಪಾಧ್ಯಕ್ಷರು,ನಿರ್ದೇಶಕರು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು,ಜೈನ್ ಮಿಲನ್ ರಾಷ್ಟೀಯ ಉಪಾಧ್ಯಕ್ಷರಾದ ವೀರಾಂಗನಾ ಶ್ರೀಮತಿ ಅನಿತಾ ಸುರೇಂದ್ರ ಕುಮಾರ್ ದಿಕ್ಸೂಚಿ ಭಾಷಣ ಮಾಡಿದರು,ಸಭಾಧ್ಯಕ್ಷರಾದ ವೀರ್ ಡಿ. ಸುರೇಂದ್ರ ಕುಮಾರ್ ಅವರು ಸಂಘಟನೆ ಬಲ ಪಡಿಸುವ ನಿಟ್ಟಿನಲ್ಲಿ ಹಾಗೂ ಜಿನ ಭಜನೆ ಕಾರ್ಯಕ್ರಮ ದ ಕುರಿತು ಮಾರ್ಗದರ್ಶನ ನೀಡಿದರು.

ವಲಯಾಧ್ಯಕ್ಷರಾದ ವೀರ್ ಯುವರಾಜ್ ಭಂಡಾರಿ ಅವರು ಎಲ್ಲಾ ವಿಭಾಗಗಳ ಚಟುವಟಿಕೆಗಳ ಬಗ್ಗೆ ವಿವರವಾದ ಮಾಹಿತಿ ನೀಡಿದರು,ಕಾರ್ಯದರ್ಶಿ ವೀರ್ ರತ್ನ ರಾಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಲಯದ ಪದಾಧಿಕಾರಿಗಳು, ಉಪಾಧ್ಯಕ್ಷರು, ನಿರ್ದೇಶಕರು ಭಾಗವಹಿಸಿ , ಕಾರ್ಯಕ್ರಮ ಯಶಸ್ವಿಗೊಳಿಸಿದರು,

Related posts

ಎಸ್‌ಡಿಪಿಐ ತೆಂಕಕಾರಂದೂರು ವತಿಯಿಂದ ಪೆರಲ್ದಾರಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಹುಣಸೆಕಟ್ಟೆಯ ರಸ್ತೆ ಬದಿಯ ಒಣ ಹುಲ್ಲಿಗೆ ಬೆಂಕಿ : ಬೆಂಕಿ ನಂದಿಸಿದ
ಅಗ್ನಿಶಾಮಕ ದಳ

Suddi Udaya

ಬೆಳ್ತಂಗಡಿ ಮೂಲದ ಕನ್ನಡದ ಹಿರಿಯ ನಟಿ, ಲೀಲಾವತಿ ನಿಧನ

Suddi Udaya

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya
error: Content is protected !!