28.6 C
ಪುತ್ತೂರು, ಬೆಳ್ತಂಗಡಿ
September 19, 2026
Uncategorized

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ: ಅಂಗನವಾಡಿಗಳ 159 ಮಕ್ಕಳಿಗೆ ಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿಚಾರಣೆ

ಸುಯ೯: ಬೆಳ್ತಂಗಡಿ ತಾಲೂಕು ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಅಂಗನವಾಡಿಗಳ 159 ಮಕ್ಕಳಿಗೆಮತ್ತು 87 ಮಂದಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಹಾಗೂ ಅರ್ಹ,ಪ್ರತಿಭಾನ್ವಿತ ವಿದ್ಯಾರ್ಥಿ ಗಳಿಗೆ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಆ.15ರಂದು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ದೇವಸ್ಥಾನದ ಆನುವಂಶಿಕ ಆಡಳಿತ ಮುಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಸಮವಸ್ತ್ರ ಹಾಗೂ ಪ್ರೋತ್ಸಾಹಧನ ವಿತರಿಸಿದರು. ವೇದಿಕೆಯಲ್ಲಿ ಸಂಗ್ರಾಮ್ ಸುರ್ಯಗುತ್ತು, ಬಿ. ರಾಜಶೇಖರ ಅಜ್ರಿ, ಬಿ. ಮುನಿರಾಜ ಅಜ್ರಿ, ಬಿ. ಇ. ಓ. ಶ್ರೀಮತಿ ತಾರಕೇಸರಿ, ಇಂದಬೆಟ್ಟು ವಲಯದಮಹಿಳಾ ಮತ್ತು ಮಕ್ಕಳ

ಅಭಿವೃದ್ಧಿ ಅಧಿಕಾರಿ ಶ್ರೀಮತಿ ನಾಗವೇಣಿ, ನಡ ಗ್ರಾ. ಪಂ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ರತ್ನಾಕರ್, ಗ್ರಾ. ಪಂ ಸದಸ್ಯರುಗಳಾದ ಸುಕೇಶ್ ಪೂಜಾರಿ, ಪ್ರವೀಣ್.ವಿ ಜಿ, ಶ್ರೀಮತಿ ಶಶಿಕಲಾ ಜೈನ್, ಶ್ರೀಮತಿ ಸುಮಿತ್ರಾ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿರಿದ್ದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಮೇಲಂತಬೆಟ್ಟು ನಲ್ಕೆತ್ಯಾರು ಬ್ರಹ್ಮಬೈದರ್ಕಳ ಊರ ಗರೋಡಿ ಸ್ಥಳದಲ್ಲಿ ಸಂಕ್ರಾಂತಿ ದರ್ಶನ- ನೂತನ ಗರೋಡಿಗೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಉಜಿರೆ ಮೋಹನ್ ಕುಮಾರ್ ಮಾಲಕತ್ವದ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

Suddi Udaya
error: Content is protected !!