23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಯಲ್ಲಿ 78ರ ಸ್ವಾತಂತ್ರ್ಯ ಸಂಭ್ರಮ ಹಾಗೂ ಪವರ್ ಮೆನ್‌ಗೆ ಗೌರವಾರ್ಪಣೆ

ಉಜಿರೆ: ಮಾಚಾರ್ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ವಠಾರದಲ್ಲಿ 78ರ ಸ್ವಾತಂತ್ರ್ಯವು ಬಹಳ ವಿಜ್ರಂಭನೆಯಿಂದ ನಡೆಯಿತು.


ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಬಿ.ಎಮ್ ಇಲ್ಯಾಸ್ ರವರು ನಿರ್ವಹಿಸಿದರು. ಖತೀಬುಸ್ತಾದರಾದ ಸಲೀಂ ಸಖಾಫಿ ರವರು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿಧ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರ ರ ಬಗ್ಗೆ ಭಾಷಣ ನಡೆಯಿತು.

ಪವರ್‌ಮೆನಾಗಿ ಕಾರ್ಯನಿರ್ವಹಿಸುತ್ತಿರುವ ರಮೇಶ್ ಗೌಡ ಕಿರಿಯಾಡಿ ರವರಿಗೆ ಆಡಳಿತ ಸಮಿತಿ ಹಾಗೂ ಜೆ.ಎಮ್.ಜೆ, ಎಸ್.ವೈ.ಎಸ್ ,ಎಸ್.ಎಸ್.ಎಫ್, ಖಿದ್ಮತ್ ಗ್ರೂಪ್ ವತಿಯಿಂದ ಶಾಲು ಹೊದಿಸಿ ಗೌರವಾರ್ಪಿಸಲಾಯಿತು.


ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಇಕ್ಬಾಲ್ ಮಾಚಾರ್ ಪವರ್ಮೆನನ್ನು ಪರಿಚಯಿಸಿ ಅವರ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಸದರ್ ಉಸ್ತಾದರಾದ ಸಿದ್ದೀಕ್ ಝೈನಿ, ಜಮಾಅತ್ ಗೌರವಾಧ್ಯಕ್ಷ ಹಂಝ ಬಿ.ಎ, ಕೋಶಾಧಿಕಾರಿ ಹಸೈನಾರ್ ಟೈಲ್ಸ್, ಅಕ್ಬರ್ ಅಲಿ ಬಂಡಸಾಲೆ, ಹಸೈನಾರ್ ಹೆಚ್.ಕೆ.ಜಿ.ಎನ್, ಎಸ್.ವೈ.ಎಸ್ ಅಧ್ಯಕ್ಷರು ಸಲೀಂ ಅಂಗಡಿ,ಪ್ರಧಾನ ಕಾರ್ಯದರ್ಶಿ ಕಬೀರ್ ಮಿಸ್ಬಾಹಿ ,ಖಿದ್ಮತ್ ಗ್ರೂಪ್ ಅಧ್ಯಕ್ಷ ಆರೀಫ್ ಮಾಚಾರ್ , ರಝಾಕ್ ಚೆಕ್ಕದಡಿ, ಅಬ್ದುಲ್ ಹಮೀದ್ ಅಂಗಡಿ, ಆದಮ್ ಆಟೋ, ಹಕೀಮ್ ಕುದುರು, SSF ಅಧ್ಯಕ್ಷ ಸಿದ್ದೀಕ್ ಚೆಕ್ಕದಡಿ ,ಪ್ರಧಾನ ಕಾರ್ಯದರ್ಶಿ ನೌಶಾದ್ ಉಪಸ್ಥಿತರಿದ್ದರು.

Related posts

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya

ರೋಗಿಗಳ ಪಾಲಿನ ಭರವಸೆಯ ಹೊಂಗಿರಣ ಡಾ. ಪ್ರಭಾಚಂದ್ರ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ದುರ್ಗಾದೇವಿ ದೇವಸ್ಥಾನದ ನಾಗನ ಕಟ್ಟೆಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ವೇದವ್ಯಾಸ ಶಿಶು ಮಂದಿರದಲ್ಲಿ ಆಟಿದ ಕೂಟ

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya
error: Content is protected !!