April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

ವೇಣೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಖಂಡ ಹಾಗೂ ಹಿಂದೂ ಜಾಗರಣ ವೇದಿಕೆ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆಯು ಆ.14ರಂದು ವೇಣೂರು ಶ್ರೀರಾಮ ಭಜನಾ ಮಂದಿರದಿಂದ ಹೊರಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಪಂಜನ್ನು ಹಿಡಿದು ಮೆರವಣಿಗೆಯ ಮೂಲಕ ನಡೆಯಿತು.

ಸಂಘದ ಮಂಗಳೂರು ವಿಭಾಗದ ಸಾಮರಸ್ಯ ಸಹ ಸಂಯೋಜಕ ಶಿವಪ್ರಸಾದ ಮಲೆಬೆಟ್ಟು ಇವರು ದಿಕ್ಸೂಚಿ ಭಾಷಣವನ್ನು ಮಾಡಿ ಸ್ವಾತಂತ್ರ್ಯದ ಪೂರ್ವದಲ್ಲಿ ಅಖಂಡವಾಗಿದ್ದ ಭಾರತ ತ್ರಿಖಂಡವಾದ ಕರಾಳ ದಿನದ ಸನ್ನಿವೇಶಗಳನ್ನು ನೆನಪಿಸಿ ಹಿಂದೂ ಸಮಾಜ ಸಂಘಟಿತವಾಗಿ ಜಾಗೃತವಾದಾಗ ಮಾತ್ರ ರಾಷ್ಟ್ರ ಉಳಿದೀತು ಎಂದರು.

ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ನಿರಂಜನ ನಿಟ್ಟಡೆ, ಪ್ರಮುಖರಾದ ವಿಜಯ ಗೌಡ, ಸುದರ್ಶನ್ ಕಾರಂತ್, ಸೋಮನಾಥ ಕೆ.ವಿ., ರಮೇಶ್ ಹೆಗ್ಡೆ, ದಿನೇಶ್ ಕರಿಮಣೇಲು, ಕೆ.ವೈ. ರವಿ ಭಟ್ ಇನ್ನಿತರರು ಉಪಸ್ಥಿತರಿದ್ದರು.

ವಿ.ಹಿಂ.ಪ. ನ ಪ್ರಮುಖರಾದ ಸುದೀಪ್ ಪಟವರ್ಧನ್ ಸ್ವಾಗತಿಸಿ, ರೋಹಿತ್ ಆಚಾರ್ಯ ನಡ್ತಿಕಲ್ಲು ವೈಯಕ್ತಿಕ ಗೀತೆ ಹಾಡಿದರು. ಸಂತೋಷ ಮಂಜಿಲ ಸಂಕಲ್ಪ ಬೋಧಿಸಿ, ವಿ.ಹಿಂ.ಪ. ನ ಪ್ರಮುಖ ಪ್ರಜ್ವಲ್ ವೇಣೂರು ಧನ್ಯವಾದ ವಿತ್ತರು. ಉಮೇಶ ನಡ್ತಿಕಲ್ಲು ಕಾರ್ಯಕ್ರಮವನ್ನು ನಿರೂಪಿಸಿದರು. ಸರ್ವಾರ್ಥ ಎಸ್ ಜೈನ್ ಹಾಡಿದ ವಂದೇಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Related posts

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!