22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

ವೇಣೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಖಂಡ ಹಾಗೂ ಹಿಂದೂ ಜಾಗರಣ ವೇದಿಕೆ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆಯು ಆ.14ರಂದು ವೇಣೂರು ಶ್ರೀರಾಮ ಭಜನಾ ಮಂದಿರದಿಂದ ಹೊರಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಪಂಜನ್ನು ಹಿಡಿದು ಮೆರವಣಿಗೆಯ ಮೂಲಕ ನಡೆಯಿತು.

ಸಂಘದ ಮಂಗಳೂರು ವಿಭಾಗದ ಸಾಮರಸ್ಯ ಸಹ ಸಂಯೋಜಕ ಶಿವಪ್ರಸಾದ ಮಲೆಬೆಟ್ಟು ಇವರು ದಿಕ್ಸೂಚಿ ಭಾಷಣವನ್ನು ಮಾಡಿ ಸ್ವಾತಂತ್ರ್ಯದ ಪೂರ್ವದಲ್ಲಿ ಅಖಂಡವಾಗಿದ್ದ ಭಾರತ ತ್ರಿಖಂಡವಾದ ಕರಾಳ ದಿನದ ಸನ್ನಿವೇಶಗಳನ್ನು ನೆನಪಿಸಿ ಹಿಂದೂ ಸಮಾಜ ಸಂಘಟಿತವಾಗಿ ಜಾಗೃತವಾದಾಗ ಮಾತ್ರ ರಾಷ್ಟ್ರ ಉಳಿದೀತು ಎಂದರು.

ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ನಿರಂಜನ ನಿಟ್ಟಡೆ, ಪ್ರಮುಖರಾದ ವಿಜಯ ಗೌಡ, ಸುದರ್ಶನ್ ಕಾರಂತ್, ಸೋಮನಾಥ ಕೆ.ವಿ., ರಮೇಶ್ ಹೆಗ್ಡೆ, ದಿನೇಶ್ ಕರಿಮಣೇಲು, ಕೆ.ವೈ. ರವಿ ಭಟ್ ಇನ್ನಿತರರು ಉಪಸ್ಥಿತರಿದ್ದರು.

ವಿ.ಹಿಂ.ಪ. ನ ಪ್ರಮುಖರಾದ ಸುದೀಪ್ ಪಟವರ್ಧನ್ ಸ್ವಾಗತಿಸಿ, ರೋಹಿತ್ ಆಚಾರ್ಯ ನಡ್ತಿಕಲ್ಲು ವೈಯಕ್ತಿಕ ಗೀತೆ ಹಾಡಿದರು. ಸಂತೋಷ ಮಂಜಿಲ ಸಂಕಲ್ಪ ಬೋಧಿಸಿ, ವಿ.ಹಿಂ.ಪ. ನ ಪ್ರಮುಖ ಪ್ರಜ್ವಲ್ ವೇಣೂರು ಧನ್ಯವಾದ ವಿತ್ತರು. ಉಮೇಶ ನಡ್ತಿಕಲ್ಲು ಕಾರ್ಯಕ್ರಮವನ್ನು ನಿರೂಪಿಸಿದರು. ಸರ್ವಾರ್ಥ ಎಸ್ ಜೈನ್ ಹಾಡಿದ ವಂದೇಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Related posts

ಉರುವಾಲು: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಜೀಪು ಚಾಲಕ ಮಾಲಕರ ಸಂಘದಿಂದ ದಿ. ಯಾದವ ಕಾಟ್ಲ ರವರ ಮನೆಯವರಿಗೆ ಆರ್ಥಿಕ ನೆರವು

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ ಹಾಗೂ ಸಿಎ ದಿನಾಚರಣೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya
error: Content is protected !!