23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಿ.ಹಿಂ.ಪ. ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆ

ವೇಣೂರು: ವಿಶ್ವ ಹಿಂದೂ ಪರಿಷತ್ ಬಜರಂಗದಳ ಪ್ರಖಂಡ ಹಾಗೂ ಹಿಂದೂ ಜಾಗರಣ ವೇದಿಕೆ ಇದರ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಪಂಜಿನ ಮೆರವಣಿಗೆಯು ಆ.14ರಂದು ವೇಣೂರು ಶ್ರೀರಾಮ ಭಜನಾ ಮಂದಿರದಿಂದ ಹೊರಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಪಂಜನ್ನು ಹಿಡಿದು ಮೆರವಣಿಗೆಯ ಮೂಲಕ ನಡೆಯಿತು.

ಸಂಘದ ಮಂಗಳೂರು ವಿಭಾಗದ ಸಾಮರಸ್ಯ ಸಹ ಸಂಯೋಜಕ ಶಿವಪ್ರಸಾದ ಮಲೆಬೆಟ್ಟು ಇವರು ದಿಕ್ಸೂಚಿ ಭಾಷಣವನ್ನು ಮಾಡಿ ಸ್ವಾತಂತ್ರ್ಯದ ಪೂರ್ವದಲ್ಲಿ ಅಖಂಡವಾಗಿದ್ದ ಭಾರತ ತ್ರಿಖಂಡವಾದ ಕರಾಳ ದಿನದ ಸನ್ನಿವೇಶಗಳನ್ನು ನೆನಪಿಸಿ ಹಿಂದೂ ಸಮಾಜ ಸಂಘಟಿತವಾಗಿ ಜಾಗೃತವಾದಾಗ ಮಾತ್ರ ರಾಷ್ಟ್ರ ಉಳಿದೀತು ಎಂದರು.

ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಹಿಂದೂ ಜಾಗರಣ ವೇದಿಕೆ ತಾಲೂಕು ಸಂಚಾಲಕ ನಿರಂಜನ ನಿಟ್ಟಡೆ, ಪ್ರಮುಖರಾದ ವಿಜಯ ಗೌಡ, ಸುದರ್ಶನ್ ಕಾರಂತ್, ಸೋಮನಾಥ ಕೆ.ವಿ., ರಮೇಶ್ ಹೆಗ್ಡೆ, ದಿನೇಶ್ ಕರಿಮಣೇಲು, ಕೆ.ವೈ. ರವಿ ಭಟ್ ಇನ್ನಿತರರು ಉಪಸ್ಥಿತರಿದ್ದರು.

ವಿ.ಹಿಂ.ಪ. ನ ಪ್ರಮುಖರಾದ ಸುದೀಪ್ ಪಟವರ್ಧನ್ ಸ್ವಾಗತಿಸಿ, ರೋಹಿತ್ ಆಚಾರ್ಯ ನಡ್ತಿಕಲ್ಲು ವೈಯಕ್ತಿಕ ಗೀತೆ ಹಾಡಿದರು. ಸಂತೋಷ ಮಂಜಿಲ ಸಂಕಲ್ಪ ಬೋಧಿಸಿ, ವಿ.ಹಿಂ.ಪ. ನ ಪ್ರಮುಖ ಪ್ರಜ್ವಲ್ ವೇಣೂರು ಧನ್ಯವಾದ ವಿತ್ತರು. ಉಮೇಶ ನಡ್ತಿಕಲ್ಲು ಕಾರ್ಯಕ್ರಮವನ್ನು ನಿರೂಪಿಸಿದರು. ಸರ್ವಾರ್ಥ ಎಸ್ ಜೈನ್ ಹಾಡಿದ ವಂದೇಮಾತರಂ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Related posts

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!