September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಅತ್ಯಂತ ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಸೈನಿಕರಾಗಿರುವ ತಂಗಚ್ಚನ್ ಇವರು ಧ್ವಜಾರೋಹಣವನ್ನು ಮಾಡಿದರು. ವಿದ್ಯಾರ್ಥಿಗಳು ರಾಷ್ಟ್ರಗೀತೆ ಧ್ವಜ ಗೀತೆ ಹಾಗೂ ವಂದೇ ಮಾತರಂ ಗೀತೆಯೊಂದಿಗೆ ಧ್ವಜಕ್ಕೆ ಗೌರವವನ್ನು ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳು ಉಳುವ ಯೋಗಿಯ ನೋಡಲ್ಲಿ ಎಂಬ ಪ್ರಾರ್ಥನಾ ಗೀತೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಾರಂಭಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಪ್ರಾಸ್ತಾವಿಕ ಮಾತನಾಡಿ ಸ್ವಾತಂತ್ರ್ಯ ದಿನಾಚರಣೆಯ ಮಹತ್ವ ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿರುವ ತಂಗಚ್ಚನ್ ಘರ್ ಘರ್ ಮೇ ಸ್ವಾತಂತ್ರ್ಯದ ಮಹತ್ವ, ಸ್ವಾತಂತ್ರ್ಯ ದೊರಕಿದ ತ್ಯಾಗಿಗಳ ತ್ಯಾಗ ಅದನ್ನು ಉಳಿಸಲು ಈಗಲೂ ಶ್ರಮವಹಿಸಿ ದುಡಿಯುತ್ತಿರುವ ಗಂಡೆದೆಯ ವೀರರ ಶ್ರಮ ಇತ್ಯಾದಿಗಳನ್ನು ಬಹಳ ಸುಂದರವಾಗಿ ವಿವರಿಸಿದರು. ನಂತರ ವಿದ್ಯಾರ್ಥಿಗಳು ಹಾಡು ನೃತ್ಯ ಭಾಷಣಗಳ ಮುಖಾಂತರ ದೇಶಭಕ್ತಿಯನ್ನು ಬಿಂಬಿಸುವ ಬೆಳೆಸುವ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು.

ವಿದ್ಯಾರ್ಥಿನಿ ಕು.ಧನ್ಯ ಶ್ರೀ ನಿರೂಪಿಸಿದ ಕಾರ್ಯಕ್ರಮದಲ್ಲಿ ಕ್ಷಮಾ ಸ್ವಾಗತಿಸಿ ಕುಮಾರಿ ನಿವೇಧ್ಯ ಅತಿಥಿಗಳ ಕಿರು ಪರಿಚಯವನ್ನು ನೀಡಿ ಕು.ಅಂಜನಾ ವಂದಿಸಿದರು. ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಸ್ವಾತಂತ್ರ್ಯ ದಿನಾಚರಣೆಯ ಈ ಸಂದರ್ಭದಲ್ಲಿ ಕೆಇ.ಬಿ ಯಲ್ಲಿ ಗಾಳಿ ಮಳೆಗೆ ಕೆಲಸ ಮಾಡುತ್ತಿರುವ ಲೈನ್ ಮ್ಯಾನ್ ಹಾಗೂ ಕಟು ರಸ್ತೆಯಲ್ಲೂ ನಿರ್ಭಯವಾಗಿ ಚಲಿಸಿ ದೊಡ್ಡ ಮುಟ್ಟಿಸುತ್ತಿರುವ ಕೆ ಎಸ್ ಆರ್ ಟಿ ಸಿ ಯ ಚಾಲಕರಿಗೆ ಸನ್ಮಾನಿಸಿ ಆ ಮೂಲಕ ಅಭಿನಂದನೆ ಸಲ್ಲಿಸಲಾಯಿತು. ತನು ಸ್ಪಂದಿಸದವರಿಗೆ ಮನ ಸ್ಪಂದಿಸುವ ಕಾರ್ಯಕ್ರಮ ತುಡಿತ ಭಾಗ ಮೂರು ಹಾಸಿಗೆ ಬಿಟ್ಟು ಮೇಲೆ ಹೇಳಲಾಗದವರ ಮನೆ ಮನೆಗೆ ಭೇಟಿ ತೆರಳಿ, ಹಣ್ಣು ಹಂಪಲು ನೀಡಿ ಕೈಲಾದ ಸಹಾಯಧನ ನೀಡಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಹೋಟೆಲ್ ಬೇಕರಿ ಗಳಿಗೆ ಕುಡಿಯುವ ನೀರು, ಶುಚಿತ್ವ ನಿಷೇದಿತ ಪ್ಲಾಸ್ಟಿಕ್ ಬಗ್ಗೆ ಪ.ಪಂ. ಮುಖ್ಯಾಧಿಕಾರಿಯಿಂದ ಪರಿಶೀಲನೆ

Suddi Udaya
error: Content is protected !!