25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SGF ಇದರ ಅಧ್ಯಕ್ಷರಾದ ರಶೀದ್ ಸಂಜಯ ನಗರ,ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ಮೆಹಬೂಬ್ ಸಂಜಯ ನಗರ,ಅಕ್ಬರ್ ಬೆಳ್ತಂಗಡಿ, ಅಬ್ಬಾಸ್ ಹಂಝಾ ಭಾಗವಹಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿ ಪ್ರತಿಭಾ ಪುರಸ್ಕಾರ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ಅದೇ ರೀತಿ ಯುವ ಪ್ರತಿಭೆ ಎಲ್ಲಾ ಬಿಡಿ ಭಾಗಗಳನ್ನು ಸಂಗ್ರಹಿಸಿ ಮೋಟಾರು ಬೈಕು ತಯಾರಿಸಿದ ಸಾರಿಮ್ ಸಂಜಯ ನಗರ ರವರು ಸಾಲು ಹೊದಿಸಿ ಸನ್ಮಾನಿಸಲಾಯಿತು.

ಸಮಿತಿಯ ಉಪಾಧ್ಯಕ್ಷರಾದ ರಿಯಾಝ್ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಸೈರೋಝ್ ಉದಯ ನಗರ, ಕೋಶಾಧಿಕಾರಿಗಳಾದ ಇಸ್ಮಾಲಿ ಐ ಬಿ,ಉಪಸ್ಥಿತರಿದ್ದರು. ಹನೀಫ್ ವರ್ಷಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಫೀರ್ ವಂದಿಸಿದರು. ಕೇರಳದ ವಯನಾಡ್ ಹಾಗೂ ಕರ್ನಾಟಕದ ಶಿರೂರುನಲ್ಲಿ ನಡೆದ ಘಟಕಗಳಿಗೆ ಮೌನ ಪ್ರಾರ್ಥನೆ ಮಾಡಲಾಯಿತು.

Related posts

ಧರ್ಮಸ್ಥಳ ಯಕ್ಷಗಾನ ಮೇಳದ ನಿವೃತ್ತ ಚಾಲಕ ಪದ್ಮಯ್ಯ ಗೌಡ ನಿಧನ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮ ಜಯಂತಿ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!