23.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜು

ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ 78 ನೇ ವರ್ಷದ ಸ್ವಾತಂತ್ರೋತ್ಸವ

ಬೆಳ್ತಂಗಡಿ :ಆ 15.ನಾವು ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದರೆ ಇದರ ಹಿಂದೆ ಸಾಕಷ್ಟು ಜನರ ಬಲಿದಾನವಿದೆ ಎಂಬುದನ್ನು ಮರೆಯುವಂತಿಲ್ಲ. ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಭಾರತದಲ್ಲಿ ಸಂಸ್ಕೃತಿ, ಭಾಷೆ ಹಾಗೂ ಧರ್ಮದಲ್ಲಿ ಸಾಕಷ್ಟು ವೈವಿಧ್ಯತೆಯನ್ನು ಕಾಣಬಹುದಾಗಿದೆ. ಆದರೂ ಕೂಡ ನಾವೆಲ್ಲ ಒಂದಾಗಿ ಏಕತೆಯಿಂದ ಭವ್ಯ ಭಾರತದಲ್ಲಿ ಬಾಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ.
ಭಾರತ ಮಾತೆಯ ಮಕ್ಕಳಾದ ನಾವೆಲ್ಲ ಎಂದಿಗೂ ಪರಸ್ಪರರ ಧರ್ಮ, ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಸಾಮರಸ್ಯದಿಂದ ಬಾಳಿದರೆ ಮಾತ್ರ ನಾವು ಶತ್ರುಗಳನ್ನು ಸೆದೆಬಡಿಯಲು ಸಾಧ್ಯವಿದೆ. ಅಲ್ಲದೇ ನಮ್ಮ ಪೂರ್ವಜರು ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟಿರುವುದು ಇಂದು ನಾವು ಧರ್ಮಕ್ಕಾಗಿ , ಭಾಷೆಗಾಗಿ ಹೋರಾಡಲಿ ಎಂದಲ್ಲ. ಬದಲಾಗಿ ಭಾರತದಲ್ಲಿ ಒಗ್ಗಟ್ಟಿನಿಂದ ಬಾಳಲಿ ಎಂದಾಗಿದೆ. ಹೀಗಾಗಿ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಭಾರತ ನಿರ್ಮಿಸಲು ಒಂದಾಗಬೇಕಿದೆ. ಸ್ವಾತಂತ್ರ್ಯ ದಿನವಾದ ಇಂದು ನಾವು ದೇಶದಲ್ಲಿ ಏಕತೆ, ಶಾಂತಿ ಹಾಗೂ ಅಭಿವೃದ್ಧಿಯನ್ನು ಸಾಧಿಸಲು ಒಂದಾಗಿ ಪ್ರತಿಜ್ಞೆ ತೊಡೋಣ ಎಂದು ಜಿಲ್ಲಾ ಕೆ ಡಿ ಪಿ ಸದಸ್ಯ ನೋಟರಿ ನ್ಯಾಯವಾದಿ ಸಂತೋಷ್ ಕುಮಾರ್ ಲೈಲಾ ನುಡಿದರು. ಅವರು ಇಂದು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ ಇಲ್ಲಿ 78 ನೇ ವರ್ಷದ ಸ್ವಾತಂತ್ರೋಸ್ಥವದ ಧ್ವಜಾರೋಹಣ ಮಾಡಿ ಮಕ್ಕಳಿಗೆ ಸಂದೇಶ ಸಾರಿದರು.
ಈ ಸಂದರ್ಬದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ, ಪಿಯೂಸಿ ಕಾಲೇಜಿನ ಪ್ರಾಚಾರ್ಯರಾದ ಸಿಸ್ಟೆರ್ , ಪಿಟಿಎ ಉಪಾದ್ಯಕ್ಷರಾದ ಜಗನ್ನಾಥ ಪುತ್ರಬೈಲು, ಹಳೆ ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾದ ನಾರಾಯಣ ಶೆಟ್ಟಿ ಉಪಸ್ಥರಿದ್ದರು.

Related posts

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ಆಗಸ್ಟ್ 12, 13 ವಿ.ವಿ. ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ

Suddi Udaya

ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆಒಲಿದು ಬಂದ “ಭಾರತೀಯ ಶಿಕ್ಷಣ ರತ್ನ ಪ್ರಶಸ್ತಿ -2025”

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಐಸ್ ಬ್ರೇಕ್’ ಕಾರ್ಯಕ್ರಮ

Suddi Udaya

ರೂ.2.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಕೊಕ್ರಾಡಿ ಪ್ರೌಢಶಾಲೆ- ಕಾಲೇಜಿನ ನೂತನ ಕೊಠಡಿಗಳ ಉದ್ಘಾಟನೆ

Suddi Udaya
error: Content is protected !!