April 2, 2025
ಶಾಲಾ ಕಾಲೇಜು

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 78ನೇ ಸ್ವಾತಂತ್ರ್ಯದಿನಾಚರಣೆ

ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 78ನೇ ಸ್ವಾತಂತ್ರ್ಯದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ಮಾಧವ ಗೌಡ ಓಣಾಜೆ ಧ್ವಜಾರೋಹಣ ನೆರವೇರಿಸಿದರು.ನಂತರ ವಿದ್ಯಾರ್ಥಿಗಳು,ಪೋಷಕರು ಮೆರವಣಿಗೆಯ ಮೂಲಕ ಸಾಗಿ ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಮಡಿದ ನಾಯಕರಿಗೆ ಜೈಕಾರ ಕೂಗಿದರು. ನಂತರ ನಡೆದ ಸಭಾ ಕಾರ್ಯಕ್ರಮ ದಲ್ಲಿ ಶಾಲೆಗೆ ವಿವಿಧ ಕೊಡುಗೆಗಳನ್ನು ನೀಡಿದ ದಾನಿಗಳನ್ನು ಗೌರವಿಸಲಾಯಿತು. ಶಾಲೆಗೆ ಪ್ರಿಂಟರ್ ಕೊಡುಗೆ ನೀಡಿದ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಗೌಡ,ಬ್ಯಾಂಡ್ ಸೆಟ್ ದಾನಿಗಳಾದ ಯೋಗೀಶ್ ಗೌಡ ಸೌತೆಗದ್ದೆ,ಕಂಪ್ಯೂಟರ್ ದಾನಿಗಳಾದ ವಿಜಯ ಗೌಡ ಸೌತೆಗದ್ದೆ,ಸ್ಟೀಲ್ ತಟ್ಟೆ ಮತ್ತು ಲೋಟ ದಾನಿಗಳಾದ ಜಯಣ್ಣ ಗೌಡ ಮಿನಂದೇಲು ಮತ್ತು ರಂಜನ್ ಗೌಡ ಪನ್ನಾಜೆ ಇವರುಗಳನ್ನು ಶಾಲಾ ಪರವಾಗಿ ಗೌರವಿಸಲಾಯಿತು. ವೇದಿಕೆಯಲ್ಲಿ ಗ್ರಾ.ಪಂ.ಸದಸ್ಯರಾದ ಕೃಷ್ಣಯ್ಯ ಆಚಾರ್ಯ,ಸಿ.ಆರ್.ಪಿ.ಶ್ರೀಮತಿ ಪ್ರತಿಮ,ಎಸ್‌.ಕೆ.ಡಿ.ಆರ್.ಪಿ.ಯ ಸೇವಾ ಪ್ರತಿನಿಧಿ ಶ್ರೀಮತಿ ಪ್ರಮೀಳಾ,
ಎಸ್.ಡಿ.ಎಂ.ಸಿ.ಉಪಾಧ್ಯಕ್ಷೆ ಶ್ರೀಮತಿ ಲೇಖಾವತಿ,ಶಾಲಾ ನಾಯಕ ಮನ್ವಿತ್ ಎಂ.ಎಸ್. ಉಪಸ್ಥಿತರಿದ್ದರು.
ಜ್ಙಾನದೀಪ ಶಿಕ್ಷಕರಾದ ಕರಿಯಣ್ಣ ಗೌಡ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್ ಎಂ ವಂದಿಸಿದರು.ಅತಿಥಿ ಶಿಕ್ಷಕಿ ಶ್ರೀಮತಿ ಹರಿಣಾಕ್ಷಿ ಎನ್ ನಿರೂಪಿಸಿದರು.ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದು,ಸಿಹಿಯೂಟದೊಂದಿಗೆ ಸಂಪನ್ನಗೊಂಡಿತು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಆಸ್ಪತ್ರೆ ಶಾಂತಿವನದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ.ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಸಿಬಿಎಸ್ಸಿ ಉಜಿರೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 100 ಫಲಿತಾಂಶ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!